ಹಣ ಸಹಾಯ ನೆಪದಲ್ಲಿ ವಂಚನೆ : ಚಿಕಿತ್ಸೆ ಸಿಗದೆ ಅಸುನೀಗಿದ ಬಾಲಕಿ

ಚಿಕ್ಕಮಗಳೂರು: ಕಿಡಿಗೇಡಿಗಳು ವಂಚಿಸಲು ಅವಕಾಶಗಳನ್ನು ಹುಡುಕುತ್ತಾ ಇರುತ್ತಾರೆ, ಮಾನವೀಯತೆ ಮರೆತು ಬಡಜನರು ಗೋಳಿಡುವಂತೆ ಮಾಡುತ್ತಾರೆ. ಇದೇ ರೀತಿ ನಗರದ ಅಬ್ದುಲ್‌ ಖಾದರ್‌ ಎಂಬಾತನು ವ್ಯಕ್ತಿಯೊಬ್ಬರ ಮಗಳ ಚಿಕಿತ್ಸೆಗೆ ಸಹಾಯ ಮಾಡುತ್ತೇನೆ ಎಂದು ಲಕ್ಷಾಂತರ ರೂಪಾಯಿ ವಂಚಿಸಿದ ಹೀನ ಕೃತ್ಯ ಬಯಲಾಗಿದೆ.ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿದ್ದಾಳೆ.

ಸದ್ಯ ಪೊಲೀಸರು ಆರೋಪಿಯನ್ನು ಈಗಾಗಲೇ ಬಂಧಿಸಿದ್ದಾರೆ. ಬೆಟ್ಟದ ಮಳಲಿಯ ರವಿ ಎಂಬುವರ ಪುತ್ರಿಯು ಬ್ರೇನ್‌ ಟ್ಯೂಮರ್‌ನಿಂದ ಬಳಲುತ್ತಿದ್ದಳು. ಮಗಳ ಚಿಕಿತ್ಸೆಗೆ ಸಹಾಯ ಮಾಡುವಂತೆ ರವಿ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಸಾರ್ವಜನಿಕರಿಂದ ಹಣಕಾಸು ನೆರವು ಸಿಗುತ್ತದೆ ಎಂಬ ಭರವಸೆಯಿಂದ ಅವರು ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ ನೋಡಿದ ಅಬ್ದುಲ್‌ ಖಾದರ್‌, ರವಿ ಅವರಿಗೆ ಕರೆ ಮಾಡಿದ್ದಾನೆ. ನಾನು ನಿಮಗೆ ಸಹಾಯ ಮಾಡುತ್ತೇನೆ, ನನಗೆ 10 ಪರ್ಸೆಂಟ್‌ ದುಡ್ಡು ಕೊಡಬೇಕು ಎಂದಿದ್ದಾನೆ. ಇದನ್ನು ನಂಬಿದ ರವಿ ಈಗ ಮೋಸಹೋಗಿದ್ದಾರೆ. ಅತ್ತ, ಮಗಳನ್ನೂ ಕಳೆದುಕೊಂಡಿದ್ದಾರೆ.

ಮಾಹಿತಿ ಪ್ರಕಾರ ಅಬ್ದುಲ್‌ ಖಾದರ್‌ನ ಮಾತು ನಂಬಿದ ರವಿ ಅವರು ಒಂದು ಲಕ್ಷ ರೂಪಾಯಿಗಿಂತ ಅಧಿಕ ಹಣ ನೀಡಿದ್ದಾರೆ.ರವಿ ಪೊಲೀಸರಿಗೆ ದೂರು ಸಲ್ಲಿಸಿದ್ದು ತೀರ್ಥಹಳ್ಳಿ ಮೂಲದ ಅಬ್ದುಲ್‌ ಖಾದರ್‌ನನ್ನು ಬಂಧಿಸಿದ್ದಾರೆ.

Nisarga K

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

3 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago