News Karnataka Kannada
Monday, April 29 2024
ಚಿಕಮಗಳೂರು

ಪಕ್ಷಾತೀತವಾಗಿ ಜನರಿಂದ ಬೆಂಬಲ- ಹೆಚ್.ಡಿ ತಮ್ಮಯ್ಯ ವಿಶ್ವಾಸ

They are supported by the people, both secularly and non-partisanly.
Photo Credit : News Kannada

ಚಿಕ್ಕಮಗಳೂರು: ವಾಮ ಮಾರ್ಗದಲ್ಲಿ ಚುನಾವಣೆ ನಡೆಸುತ್ತಿರುವ ಶಾಸಕ ಸಿ.ಟಿ ರವಿಯವರನ್ನು ತಿರಸ್ಕರಿಸಿ ಜಾತ್ಯಾತೀತ ವಾಗಿ, ಪಕ್ಷಾತೀತವಾಗಿ ಮತದಾರರು ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಹಿರೇಮಗಳೂರಿನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ ಹಿರೇಮಗಳೂರು ಗ್ರಾಮದಲ್ಲಿ ಇತಿಹಾಸ ಪ್ರಸಿದ್ದ ಧಾರ್ಮಿಕ ಕ್ಷೇತ್ರವಾಗಿದ್ದು ಎಲ್ಲಾ ದೇವರು ಇಲ್ಲಿ ನೆಲೆಸಿವೆ ಎಂದು ತಿಳಿಸಿದರು.

ಹಿರೇಮಗಳೂರು ನನ್ನ ರಾಜಕೀಯ ಜೀವನ ಪ್ರಾರಂಭ ಮಾಡಿದ ಊರು ಹಾಗಾಗಿ ಇಲ್ಲಿನ ಗ್ರಾಮಸ್ಥರು ಅತಿ ಹೆಚ್ಚು ನನ್ನ ಸ್ನೇಹಿತರು, ಹಿತೈಷಿಗಳು, ಬಂಧುಗಳು ಇದ್ದಾರೆ ಈ ಭಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಮತ ನೀಡುವುದರ ಮೂಲಕ ತಮ್ಮಗಳ ಸೇವೆ ಮಾಡಲು ಅವಕಾಶ ಮಾಡಿ ಕೊಡಬೇಕೆಂದು ಮನವಿ ಮಾಡಿದರು.

ಜನಪರವಾದ, ಶೋಷಿತ ವರ್ಗಗಳ ಜೊತೆ ಇದ್ದು ಅವರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಸವಲತ್ತುಗಳನ್ನು ಕೊಡಿಸುವಲ್ಲಿ ಸಫಲರಾಗಿದ್ದೇವೆ. ಬಿಜೆಪಿಯಲ್ಲಿ ಗುರ್ತಿಸಿಕೊಂಡಿದ್ದ ನಾನು ಎಂಎಲ್‌ಎ ಸ್ಥಾನದ ಆಕಾಂಕ್ಷಿ ಎಂದು ಟಿಕೆಟ್ ಕೇಳಿದ್ದೇ ತಪ್ಪಾಯಿತು ಉಸಿರುಗಟ್ಟಿದ ವಾತಾವರಣ ಬಿಜೆಪಿಯಲ್ಲಿ ನಿರ್ಮಾಣವಾಗಿದ್ದರಿಂದ ಆ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡೆ ಎಂದರು.

ಶಾಸಕರು ಮತ್ತು ಆರ್.ಎಸ್.ಎಸ್ ಮುಖಂಡರೊಬ್ಬರು ನನ್ನ ತೇಜೋವಧೆಮಾಡಿ ನೋವುಂಟು ಮಾಡಿದ್ದರಿಂದ ರಾಜಕಾರಣನೇ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದೆ, ನನ್ನ ಹಿತೈಷಿಗಳು, ಬೆಂಬಲಿಗರು, ಸ್ನೇಹಿತರ ಒತ್ತಾಸೆಯಂತೆ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರಿದೆ ಜನ ಸಾಮಾನ್ಯರ ಜನಾಭಿಪ್ರಾಯದ ಆಧಾರದಲ್ಲಿ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಗ್ಗೆ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.

ಮೇ.೧೦. ರಂದು ನಡೆಯಲಿರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಕ್ಷೇತ್ರದ ಶಾಸಕ ಸಿ.ಟಿ ರವಿಯವರನ್ನು ಸೋಲಿಸುವ ಮೂಲಕ ನನ್ನನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ಹಿರೇಮಗಳೂರಿನಿಂದ ಪ್ರಾರಂಭವಾಗುತ್ತದೆ ನನ್ನ ಜನಬಲ ಜಾತ್ಯಾತೀತ ಮತ್ತು ಪಕ್ಷಾತೀತ ವಾಗಿ ದೇಣಿಗೆ ನೀಡುವ ಮೂಲಕ ನನಗೆ ಆಶೀರ್ವದಿಸುತ್ತಾರೆ ಎಂದು ಹೇಳಿದರು. ಆತ್ಮ ಒಪ್ಪಿ ರಾಜಕಾರಣ ಮಾಡುತ್ತಿದ್ದೇನೆ ಹೊರತು ಇದರಲ್ಲಿ ವಯಕ್ತಿಕ ಹಿತಾಸಕ್ತಿ ಏನು ಇಲ್ಲ ಎಂದ ಅವರು ನಾನು ಯಾವುದೇ ಗುತ್ತಿಗೆ ಮಾಡಿಲ್ಲ ಕ್ಷೇತ್ರದಲ್ಲಿ ನಡೆದಿರುವ ಅವ್ಯವಹಾರಗಳನ್ನು ನನ್ನ ಅವಧಿಯಲ್ಲಿ ಆಗಿರುವ ಕಾಮಗಾರಿಗಳ ಸಹಿತ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಭ್ರಷ್ಠಾಚಾರ, ದುರಹಂಕಾರದಿಂದ ಮೆರೆಯುತ್ತಿರುವ ಶಾಸಕರನ್ನು ಬದಲಿಸಲು ಕ್ಷೇತ್ರದ ಮತದಾರರು ತೀರ್ಮಾನಿಸಿದ್ದಾರೆ ಅವರ ಆಸೆ ಈಡೇರುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ ಹೆಚ್.ಡಿ ತಮ್ಮಯ್ಯ ಬಿಜೆಪಿಯಲ್ಲಿದ್ದಾಗ ಶಾಸಕರ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮೊದಲ ವ್ಯಕ್ತಿ ನಾನೇ ಆದರೆ ಹೊರಗೆ ಬಂದಾಗ ಮಾತನಾಡುವುದನ್ನು ಬಿಡಿ ಎಂದು ಅಲ್ಲಿನ ಮುಖಂಡರಿಗೆ ಹೇಳುತ್ತಿದ್ದೆ ಎಂದರು.

ಈ ಜಗತ್ತಿನಲ್ಲಿ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ನಾನು ಈ ಚುನಾವಣೆಯಲ್ಲಿ ಗೆಲ್ಲುವುದು ಅಷ್ಟೇ ಸತ್ಯ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು