News Karnataka Kannada
Saturday, April 27 2024
ಚಿಕಮಗಳೂರು

ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಮತಯಾಚಿಸಲು ಬೋಜೇಗೌಡ ಕರೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ರಾಜ್ಯ ನಾಯಕರುಗಳು ಹೊಂದಾಣಿಕೆ ಮೇರೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕ್ಷೇತ್ರದ ಕಾರ್ಯಕರ್ತರು ಮತಯಾಚಿಸಿ ಗೆಲುವಿಗೆ ಕಾರ್ಯೋನ್ಮುಖರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಕರೆ ನೀಡಿದರು.
Photo Credit : NewsKarnataka

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ರಾಜ್ಯ ನಾಯಕರುಗಳು ಹೊಂದಾಣಿಕೆ ಮೇರೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕ್ಷೇತ್ರದ ಕಾರ್ಯಕರ್ತರು ಮತಯಾಚಿಸಿ ಗೆಲುವಿಗೆ ಕಾರ್ಯೋನ್ಮುಖರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಕರೆ ನೀಡಿದರು.

ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಪರ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ಮುಖಂಡರೊಂದಿಗೆ ಒಗ್ಗಟ್ಟಿನಿಂದ ಭಾಗಿಯಾಗಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು, ತರೀಕೆರೆ, ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹೋಬಳಿ ಮಟ್ಟದಲ್ಲಿ ಬೆಂಬಲಿತ ಅಭ್ಯರ್ಥಿ ಪೂಜಾರಿ ಪರವಾಗಿ ಸ್ಥಳೀಯವಾಗಿ ಭಿನ್ನಾಭಿಪ್ರಾಯವನ್ನು ಬದಿಗಿರಿಸಿ ಎನ್‌ಡಿಎ ಮೈತ್ರಿಕೂಟದ ಒಪ್ಪಂದ ಮೇರೆಗೆ ಹಾಗೂ ಹೆಚ್.ಡಿ.ಕುಮಾರಸ್ವಾಮಿಯವರ ಮಾತಿಗೆ ಬೆಲೆಕೊಟ್ಟು ಒಮ್ಮತದಿಂದ ಗೆಲುವಿಗೆ ಸಹಕರಿಸಬೇಕು ಎಂದರು.

ರಾಜ್ಯದಲ್ಲಿ ೨೮ ಲೋಕಸಭಾ ಕ್ಷೇತ್ರದಲ್ಲಿ ೨೫ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದು ಅಲ್ಲಿನ ಜಿಲ್ಲಾವಾರು ಜೆಡಿಎಸ್ ಮುಖಂಡರುಗಳು ಒಮ್ಮತದಿಂದ ಬೆಂಬಲಿತ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಲಿದ್ದಾರೆ. ಅದೇ ರೀತಿ ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಮೂರು ಅಭ್ಯರ್ಥಿಗಳು ಜೆಡಿಎಸ್‌ನಿಂದ ಸ್ಪರ್ಧಿಸಿದ್ದು ಅಲ್ಲಿನ ಜಿಲ್ಲಾವಾರು ಬಿಜೆಪಿ ಮುಖಂಡರುಗಳು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಪರ ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್‌ ಅಜಿತ್‌ಕುಮಾರ್ ಮಾತನಾಡಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಜ್ಯನಾಯಕರುಗಳ ಆದೇಶದಂತೆ ಜಿಲ್ಲೆಯ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲಿಸಲಿದ್ದು ಕಡೂರು ಕ್ಷೇತ್ರವು ಹಾಸನಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಕಡೂರಿನ ಬಿಜೆಪಿ ಮುಖಂಡರುಗಳು ಜೆಡಿಎಸ್ ಪರ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ, ಗೋಪಿ, ಮಾಜಿ ಸದಸ್ಯ ದಿನೇಶ್, ಎಸ್ಸಿಎಸ್ಟಿ ಘಟಕದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ನಗರ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ತಾ.ಪಂ. ಮಾಜಿ ಸದಸ್ಯ ಆನಂ ದ್‌ನಾಯ್ಕ್, ಮುಖಂಡರುಗಳಾದ ಆನಂದೇಗೌಡ, ಚಿದಾನಂದ್, ಗುಪ್ತ, ಹೆಚ್.ಎಸ್.ಮಂಜಪ್ಪ, ರತ್ನ ಮತ್ತಿ ತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು