ಚಿಕ್ಕಮಗಳೂರು: ನಿಮ್ಮ ಶಾಸಕರನ್ನು ನಿಯಂತ್ರಣ ದಲ್ಲಿಟ್ಟುಕೊಳ್ಳುವ ಯೋಗ್ಯತೆ ಇಲ್ಲವಾದರೆ ನಿಮ್ಮದು ರಾಷ್ಟ್ರೀಯ ಪಕ್ಷ ಎಂದು ಏಕೆ ಇಟ್ಟುಕೊಂಡಿದ್ದೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಬಿಜೆಪಿಯವರು ನಮ್ಮ ಶಾಸಕರನ್ನು ಕದ್ದು ಕೊಂಡು ಹೋಗುತ್ತಾರೆ ಎಂದು ಖರ್ಗೆ ನಿನ್ನೆ ನಗರದಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ, ಎಂಎಲ್ಎಗಳು ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆ ಗೆದ್ದು ಬಂದಿದ್ದಾರೆ. ಇದಕ್ಕೆ ಉತ್ತರ ಕೊಡಲು ಖರ್ಗೆ ಅವರಿಗೆ ಸಾಧ್ಯವಿಲ್ಲ ಎಂದರು.
ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಹಗರಣದಲ್ಲಿ ೮೦೦೦ ಕೋಟಿ ರೂ. ಲೂಟಿ ಹೊಡೆದಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆಂಪಯ್ಯ ವರದಿ ಕೊಟ್ಟಿದ್ದಾರೆ. ಇದನ್ನು ಕಾಂಗ್ರೆಸ್ ಮುಚ್ಚಿ ಟ್ಟುಕೊಂಡು ಬಂದಿದೆ. ಡಿ.ಕೆ.ಶಿವ ಕುಮಾರ್ ತಿಹಾರ್ ಜೈಲಿನಲ್ಲಿದ್ದು ಬಂದವರು. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಮುಂದಿನ ದಿನಗಳಲ್ಲಿ ಜೈಲಿಗೆ ಹೋಗೇ ಹೋಗುತ್ತಾರೆ. ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯ ವಿಲ್ಲ ಎಂದರು.
ರಾಷ್ಟ್ರದ್ರೋಹಿ ಮುಸ್ಲಿಮರ ಮತ ನಮಗೆ ಬೇಡ ಎಂದು ಹೇಳಿದ್ದೇನೆ. ಇಂದೂ, ನಾಳೆಯೂ ಅದನ್ನೇ ಹೇಳುತ್ತೇನೆ. ಎಲ್ಲಾ ಮುಸಲ್ಮಾನರು ರಾಷ್ಟ್ರದ್ರೋಹಿಗಳು ಎಂದು ನಾವೆಂದೂ ಹೇಳಿಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹೀಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಬಿಜೆಪಿ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾ ಮಯ್ಯ ಅವರು ಬಿಜೆಪಿಯನ್ನು ಕೋ ಮುವಾದಿ ಅನ್ನುತ್ತಾರೆ. ಕೋಮುವಾ ದಿಗಳಾರು, ಜಾತಿವಾದಿಗಳಾರು ಎನ್ನುವುದನ್ನು ಈ ಬಾರಿ ಜನ ಚುನಾ ವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದರು.
ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಒಕ್ಕಲಿಗರೂ ನನ್ನ ಹಿಂದೆ ಬಂದು ನಿಂತುಕೊಳ್ಳಿ ನನ್ನನ್ನು ಸಿಎಂ ಮಾಡಿ ಅಂತಾರೆ, ಅದೇ ರೀತಿ ಸಿದ್ದ ರಾಮಯ್ಯ ಅವರೂ ಜಾತಿವಾದ ಮಾಡುತ್ತಿದ್ದಾರೆ ಆದರೆ ರಾಷ್ಟ್ರೀಯ ವಾದಿ ಬಿಜೆಪಿಯನ್ನ ಕೋಮುವಾದಿ ಎಂದು ಕರೆಯುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸಿಗರು ಲಿಂಗಾಯತರನ್ನು ಒಡೆದರು, ಹಿಂದೂಗಳನ್ನು ಕಗ್ಗೊಲೆ ಮಾಡಿದ ಮುಸಲ್ಮಾನ್ ಗೂಂಡಾಗಳಿಗೆ ರಕ್ಷಣೆ ಕೊಟ್ಟ ಕಾರಣಕ್ಕೆ ಚಾಮುಂ ಡೇಶ್ವರಿಯಲ್ಲಿ ಸಿದ್ದರಾಮಯ್ಯನವರೂ ಸೋತರು, ಅಧಿಕಾರವನ್ನೂ ಕಳೆದುಕೊಂಡರು ಎಂದರು.
ಇಂದು ಬಿಜೆಪಿ ರಾಷ್ಟ್ರೀಯ ವಿಚಾರಗಳಿಗೆ ಮೆರಗು ನೀಡಲು ಶ್ರಮಿಸುತ್ತಿರುವ ಕಾರಣಕ್ಕೆ ಎಲ್ಲಾ ಚುನಾವಣೆಗಳಲ್ಲಿ ಜನರು ಬಿಜೆಪಿಯನ್ನು ಗೆಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಇಡೀ ದೇಶಗಳಲ್ಲಿ ಕೆಲವು ರಾಷ್ಟ್ರದ್ರೋಹಿ ಮುಸಲ್ಮಾನರನ್ನು ಸಂತೃಪ್ತಿಗೊಳಿಸುವ ಸಲುವಾಗಿ ನಮ್ಮ ಸಂಸ್ಕೃತಿಗೆ ತಿಲಾಂಜಲಿ ಇಟ್ಟರು ಅದಕ್ಕಾಗಿ ಕಾಂಗ್ರೆಸ್ಗೆ ನಮ್ಮ ಜನ ತಿಲಾಂಜಲಿ ಇಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಮಾಡಿ ಗೋವುಗಳನ್ನು ಕೊಲ್ಲಲು ಅವಕಾಶ ಕೊಡುತ್ತೇವೆ ಎಂದಿದ್ದಾರೆ. ಮತಾಂತರ ಕಾಯಿದೆ ರದ್ದು ಮಾಡು ತ್ತೇವೆ. ರಾಷ್ಟ್ರದ್ರೋಹಿ ಸಂಘಟನೆ ಪಿಎಫ್ಐ ಮೇಲಿನ ನಿರ್ಬಂಧ ತೆಗೆಯುತ್ತೇವೆ ಎಂದು ಹೇಳಿದ್ದಾರೆ. ಮತ ದಾನಕ್ಕೆ ಹೋಗುತ್ತಿರುವ ರಾಷ್ಟ್ರೀಯ ವಾದಿಗಳು ಇದನ್ನು ಗಮನದಲ್ಲಿಟ್ಟು ಕೊಂಡು ಹೋಗಬೇಕು ಎಂದು ಕರೆ ನೀಡಿದರು.
ಇಡೀ ದೇಶದ ಜನರು ಕರ್ನಾಟಕವನ್ನು ನೋಡುತ್ತಿದ್ದಾರೆ. ಮೊದಲ ಬಾರಿಗೆ ಪೂರ್ಣ ಬಿಜೆಪಿ ನೇತೃತ್ವದ ಪೂರ್ಣ ಬಹುಮತದ ಸರ್ಕಾರ ವನ್ನು ತರುತ್ತೇವೆ ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಪ್ರೇರಣೆ ಸಿಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ವಕ್ತಾರ ಟಿ.ರಾಜಶೇಖರ್, ನಗರ ಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್, ಮಾಜಿ ಅಧ್ಯಕ್ಷರುಗಳಾದ ಪುಷ್ಪರಾಜ್, ದೇವರಾಜ್ಶೆಟ್ಟಿ ಇತರರು ಇದ್ದರು.