News Karnataka Kannada
Tuesday, May 07 2024
ಚಿಕಮಗಳೂರು

ಶಾಖಾದ್ರಿ ಮನೆಯಲ್ಲಿ ವನ್ಯ ಜೀವಿ ಚರ್ಮ ಪತ್ತೆ: ಪ್ರಕರಣ ದಾಖಲು

Wild animal skin found at Shakhadri house, case registered
Photo Credit : News Kannada

ಚಿಕ್ಕಮಗಳೂರು: ರಾಜ್ಯದಲ್ಲಿ ವನ್ಯಜೀವಿ ಪಳಯುಳಿಕೆ ಧಾರಣೆ, ಸಂಗ್ರಹ ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಅದೇ ರೀತಿ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ‌ದರ್ಗಾದ ಶಾಖಾದ್ರಿ ಹಜರತ್ ಸೈಯದ್ ಗೌತ್ ಮೊಹಿದ್ದೀನ್ ಮನೆಯಲ್ಲಿ ಹುಲಿ‌, ಚಿರತೆ, ಜಿಂಕೆ ಚರ್ಮ ಪತ್ತೆಯಾದ ಹಿನ್ನೆಲೆಯಲ್ಲಿ ಶಾಖಾದ್ರಿ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆ 1972 ರ ಅಡಿ ಪ್ರಕರಣ ದಾಖಲಾಗಿದೆ.

ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಶಾಖಾದ್ರಿ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ. ಶಾಖಾದ್ರಿ ಮನೆಯಲ್ಲಿ ಹುಲಿ ಚರ್ಮ ಇಟ್ಟುಕೊಂಡಿದ್ದಾರೆಂದು ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಶುಕ್ರವಾರ ನಗರದ ಮಹಾತ್ಮಾ ಗಾಂಧಿ ರಸ್ತೆಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿದ್ದರು.

ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಶೀಲನೆ ವೇಳೆ ಚಿರತೆ, ಜಿಂಕೆ ಮತ್ತು ಚರ್ಮ ಪತ್ತೆಯಾಗಿತ್ತು. ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಚರ್ಮದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇನ್ನು ಶಾಖಾದ್ರಿ ಶುಕ್ರವಾರದಿಂದ ಅಧಿಕಾರಿಗಳ ತನಿಖೆಗೆ ಸಹಕಾರ ನೀಡದೆ ನಾಪತ್ತೆಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು