ಕೃಷಿಕನ ಮೇಲೆ ಕಾಡುಕೋಣ ದಾಳಿ: ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲು

ಮೂಡಿಗೆರೆ: ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ, ದುರ್ಗದಹಳ್ಳಿ ಸಮೀಪ ನಡೆದಿದೆ.

ದುರ್ಗದಹಳ್ಳಿ ಗ್ರಾಮದ ಹಲಗಡ್ಕ ನಿವಾಸಿ ರಾಜೇಶ್ ಕಾಡುಕೋಣದಿಂದ ದಾಳಿಗೊಳಗಾದ ರೈತ. ತನ್ನ ಜಮೀನಿನಲ್ಲಿ ಇದ್ದಾಗ ಕಾಡುಕೋಣವೊಂದು ರಾಜೇಶ್ ಮೇಲೆ ದಾಳಿ ನಡೆಸಿದ್ದು, ಕಾಡುಕೋಣ ದಾಳಿಯಿಂದ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಕಾಡುಕೋಣದ ತಿವಿತದಿಂದ ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗ ಪೆಟ್ಟಾಗಿದೆ. ತಲೆ ಮತ್ತು ಹೊಟ್ಟೆ ಭಾಗದಲ್ಲಿ ಆಳವಾದ ಗಾಯಗಳಾಗಿವೆ.

ಕಾಡುಕೋಣ ರಾಜೇಶ್ ಅವರನ್ನು ತನ್ನ ಕೊಂಬಿನ ಮೇಲಿರಿಸಿ ಸುಮಾರು ದೂರ ಎಳೆದೊಯ್ದಿತ್ತು ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಅವರನ್ನು ಸ್ಥಳೀಯರು ಕಳಸ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆಯ ನಂತರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಿಸಲಾಗಿದೆ. ಅಲ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, ಕಳೆದ ಕೆಲ ದಿನಗಳ ಹಿಂದೆ ಜಾವಳಿ ಸಮೀಪದ ಮೂವರ ಮೇಲೆ ಕಾಡುಕೋಣಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಕಾಡುಕೋಣಗಳ ಹಾವಳಿಯಿಂದಾಗಿ ಜನರು ಕಾರ್ಮಿಕರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

Chaitra Kulal

Recent Posts

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

17 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

44 mins ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

1 hour ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

1 hour ago

ರೀಲ್ಸ್ ಸ್ಟಾರ್ ಗೀತಾಶ್ರೀ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…

2 hours ago

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

2 hours ago