News Karnataka Kannada
Sunday, May 12 2024
ಚಿಕಮಗಳೂರು

ಬಡವರ ಜಮೀನು ಖುಲ್ಲಾಗೊಳಿಸಲು ಅವಕಾಶ ನೀಡುವುದಿಲ್ಲ-ಶಾಸಕಿ ನಯನ ಮೋಟಮ್ಮ

Will not allow the land of the poor to be cleared: MLA Nayana Motamma
Photo Credit : News Kannada

ಮೂಡಿಗೆರೆ: ಶ್ರೀಮಂತರು ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡರೆ ಸುಮ್ಮನಾಗುವ ಅರಣ್ಯ ಇಲಾಖೆ ಅಧಿಕಾರಿಗಳು ಬಡವರ ಒಂದೆರಡು ಎಕರೆ ಜಮೀನಿನಲ್ಲಿರುವ ಬೆಳೆ ನಾಶಪಡಿಸಿ ಜಾಗ ಖುಲ್ಲಾಗೊಳಿಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಬಡವರ ಜಮೀನು ಖುಲ್ಲಾ ಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ತಿಳಿಸಿದರು.

ತಾಪಂನಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವ ವೇಳೆ ತಾರತಮ್ಯ ನೀತಿ ವಿರುದ್ಧ ಹರಿಹಾಯ್ದರು. ಫಾರ್ಮ್ ನಂ ೫೩ ಮತ್ತು ೫೭ರಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಅದೇ ಜಾಗದಲ್ಲಿ ಕೃಷಿ ಮಾಡಿಕೊಂಡಿದ್ದಾರೆ. ಅಕ್ರಮ ಸಕ್ರಮ ಸಮಿತಿ ಇನ್ನೂ ರಚಿಸಿಲ್ಲ. ಸಮಿತಿ ರಚನೆಯಾದ ಬಳಿಕ ಫಲಾನುಭವಿಗಳಿಗೆ ಜಾಗ ಹಸ್ತಾಂತರಿಸ ಲಾಗುವುದು. ರೈತರಿಗೆ ಅಧಿಕಾರಿಗಳು ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿದರು. ಸರ್ಕಾರಿ ಕಟ್ಟಡ, ಹಾಸ್ಟೆಲ್, ಶಾಲೆ, ಪಶು ಆಸ್ಪತ್ರೆ, ಅಂಗನವಾಡಿ ಕಟ್ಟಡ ನಿರ್ಮಿಸಲು ಮುಂದಾದರೆ ಅರಣ್ಯ ಇಲಾಖೆ ಅಧಿಕಾರಿಗಳು ಜಾಗ ನಮ್ಮದೆಂದು ಅಡ್ಡಿಪಡಿಸುತ್ತಿದ್ದಾರೆ. ಕುಂದೂರು ಗ್ರಾಮದ ದುರ್ಗಮ ಅರಣ್ಯದಲ್ಲಿ ವಾಸಿಸುತ್ತಿರುವ ೧೧ ಕುಟುಂಬದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಿ ೩ ತಿಂಗಳು ಕಳೆದರೂ ಅಧಿಕಾರಿಗಳು ಮುಂದಾಗಿಲ್ಲ. ಕೂಡಲೆ ಅವರನ್ನು ಸುರಕ್ಷಿತ ಸ್ಥಳದಲ್ಲಿ ಸ್ಥಳಾಂತರಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ತಾಲೂಕಿನ ವಿವಿಧ ರಸ್ತೆಗಳು ಸಂಪೂರ್ಣ ಗುಂಡಿಯಾಗಿವೆ. ಎಲ್ಲ ರಸ್ತೆ ಕಾಮಗಾರಿ ಇನ್ನು ೩ ತಿಂಗಳಲ್ಲಿ ಪೂರ್ಣ ಗೊಳಿಸಬೇಕು. ಜನ್ನಾಪುರದಿಂದ ಕಿರು ಗುಂದದವರೆಗೆ ೬ ಕಿ.ಮೀ. ರಸ್ತೆ ಸಂಪೂ ರ್ಣ ಗುಂಡಿಯಾಗಿದೆ. ಪೊದೆಗಳು ರಸ್ತೆಗೆ ಚಾಚಿಕೊಂಡಿವೆ. ಚರಂಡಿ ಇಲ್ಲದೆ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಬೆಟ್ಟದಮನೆಯ ಹೇಮಾವತಿ ನದಿ ಸೇತುವೆ ಕಾಮಗಾರಿ ಆರಂಭಿಸಿ ೬ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿ ಸಿಲ್ಲ ಎಂದು ಪಿಡಬ್ಲ್ಯುಡಿ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ನಿರ್ಮಿತಿ ಕೇಂದ್ರದಿಂದ ನಡೆಯುತಿ ರುವ ಕಾಮಗಾರಿ, ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಅಬಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಮೀನುಗಾರಿಕೆ, ಪಶುಪಾಲನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನಡೆದ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ತಾಪಂ ಇಒ ಡಾ. ಸಿ.ರಮೇಶ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು