ಚಿಕ್ಕಮಗಳೂರು: ಇದೀಗ ಯದುವೀರ್ ಕೃಷ್ಣದತ್ತ ಒಡೆಯರ್ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಎಲ್ಲೆಡೆ ಸಣ್ಣದಾಗಿ ಸುದ್ದಿ ಹರದಾಡುತ್ತಿದೆ. ಹೀಗಿರುವಾಗ ಇತ್ತೀಚೆಗೆ ಶೃಂಗೇರಿ ಮಠಕ್ಕೆ ಬಂದು ಶಾರದೆ ದರ್ಶನ ಪಡೆದಿರುವದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.
ಶೃಂಗೇರಿಯ ಶ್ರೀಮಠಕ್ಕೂ ಹಾಗೂ ಮೈಸೂರು ಸಂಸ್ಥಾನಕ್ಕೂ ಇತಿಹಾಸ ಕಾಲದಿಂದಲೂ ಅವಿನಾಭವ ಸಂಬಂಧವಿದೆ. ಹಿಂದಿನಿಂದಲೂ ರಾಜ ಮನೆತನದವರು ದೇವರ ಭಕ್ತಿ,ಸಂಪ್ರದಾಯದಲ್ಲಿ ಹೆಚ್ಚು ಆಸಕ್ತಿ ಉಳ್ಳವರು. ಅದಕ್ಕೆ ಸಾಕ್ಷಿ ಎಂಬಂತೆ ಯದುವೀರ್ ಕೃಷ್ಣದತ್ತ ಒಡೆಯರ್ ತಾಯಿ ಶಾರದೆ ದರ್ಶನ ಪಡೆದು ಅಲದಲಿ ಧಾರ್ಮಿಕ ಕಾರ್ಯಕ್ರಮಗಳಲ್ಲು ಭಾಗಿಯಾಗಿದ್ದರು. ಕಿರಿಯ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು.
ಯಾವುದೇ ಒಳಿತು ಕಾರ್ಯಕ್ಕೆ ಮುನ್ನ ಶೃಂಗೇರಿಗೆ ಬಂದು ದರ್ಶನ ಪಡೆಯುವುದು ಅಲ್ಲದೆ ಮಠದ ಹಲವು ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದು ಹಿಂದಿನಿಂದಲೂ ನಡೆದು ಬಂದ ಮೈಸೂರು ರಾಜವಂಶಸ್ಥರ ಸಂಪ್ರದಾಯ. ಹಿಗಾಗಿ ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಸಾಧ್ಯತೆ ಇರಬಹುದು ಎಂಬ ಸಣ್ಣ ಕುತೂಹಲ ಎಲ್ಲರಲ್ಲೂ ಇದೆ.