News Karnataka Kannada
Sunday, April 28 2024
ಶಿವಮೊಗ್ಗ

ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾಗುವುದು:ಲಕ್ಷ್ಮೀ ಪ್ರಸಾದ್

Lakshmi Prasad
Photo Credit : News Kannada

ಶಿವಮೊಗ್ಗ : ಜಿಲ್ಲೆಯಲ್ಲಿ ಒಟ್ಟಾರೆ ಅಪರಾಧ ಪ್ರಕರಣಗಳಲ್ಲಿ ಶೇ.10 ರಷ್ಟು ಕಡಿಮೆ ಮಾಡಲು ಮುಂದಿನ ಆರು ತಿಂಗಳಲ್ಲಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು.

ಗುರುವಾರ ನಗರದಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಗಾಂಜಾ, ಮಟ್ಕಾ ಹಾಗೂ ಅಬಕಾರಿ ಪ್ರಕರಣಗಳನ್ನು ಕಡಿಮೆ ಮಾಡಲು ಯತ್ನಿಸಲಾಗುತ್ತಿದೆ. ಇವು ಕಡಿಮೆಯಾದರೆ ಪ್ರತಿಶತ ಅಪರಾಧಗಳು ಕಡಿಮೆಯಾಗಲಿವೆ ಎಂದರು.

ಐಪಿಸಿ ಅಪರಾಧ ಪ್ರಕರಣಗಳು ಶೇ.8 ರಷ್ಟು ಕಡಿಮೆಯಾದರೆ, ಸಿಆರ್‌ಪಿಸಿ ಪ್ರಕರಣಗಳು ಶೇ.25 ರಷ್ಟು ಹೆಚ್ಚಾಗಿವೆ. ಇವು ಹೆಚ್ಚಾಗಲು ಅನಧಿಕೃತ ಮದ್ಯ ಮಾರಾಟ, ಭೂ ವಿವಾದ, ಗಾಂಜಾ ಮಾರಾಟ ಕೂಡ ಕಾರಣವಾಗಿವೆ. ಮನೆಗಳ್ಳತನ, ವಾಹನ ಕಳ್ಳತನ ಹಾಗೂ ರಾಬರಿ ಪ್ರಕರಣಗಳು ಹೆಚ್ಚಾಗಿವೆ. ಮೊಬೈಲ್ ಕಳ್ಳತನವನ್ನು ರಾಬರಿ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ ಎಂದರು.

ಫೋಕ್ಸೋ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂದ ಅವರು, ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಒಟ್ಟಾರೆ ಶಿಕ್ಷೆ ಪ್ರಮಾಣ ಕಡಿಮೆಯಾಗುತ್ತಿದೆ. ಹೀಗಾಗಿ ಅಪಘಾತ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣದ ಹೆಚ್ಚಾಗುವಂತೆ ಕ್ರಮಕೈಗಗೊಳ್ಳಲಾಗುತ್ತದೆ ಎಂದರು.

ನಗರದಲ್ಲಿ ಸಂಚಾರ ವ್ಯವಸ್ಥೆಗೆ ಸುಧಾರಣೆಗೆ ಇಷ್ಟರಲ್ಲೇ ಸಭೆ ನಡೆಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಯಾದ ರಸ್ತೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಫಲಕ ಅಳವಡಿಸಲಾಗುತ್ತದೆ. ಶಾಲೆ ಬಿಡುವ ಸಂದರ್ಭದಲ್ಲಿ ಹೋಂ ಗಾರ್ಡ್ ಅಥವಾ ಪೊಲೀಸರನ್ನು ನಿಯೋಜನೆ ಮಾಡಿ ಅಪಘಾತ ನಿಯಂತ್ರಿಸಲಾಗುತ್ತದೆ. ಇದಕ್ಕಾಗಿ ಸಿಆರ್‌ಪಿ, ಬಿಆರ್‌ಪಿ ಹಾಗೂ ಬಿಇಓ ಗಳನ್ನೊಳಗೊಂಡ ತಂಡ ರಚನೆ ಮಾಡಲಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು