ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಗುರುವಾರ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಸಿಕ್ಕಿಕೊಂಡಿದೆ.
ಆಗುಂಬೆ ಘಾಟಿಯ 7ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಚಾಲಕ ಜಾಣ್ಮೆ ತೋರಿದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.
ಭತ್ತ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿತ್ತು. ಸ್ವಲ್ಪ ಮುಂದೆ ಹೋಗಿದ್ದರೂ ಲಾರಿ ಪ್ರಪಾತಕ್ಕೆ ಬೀಳುತ್ತಿತ್ತು. ತಡೆಗೋಡೆಯಲ್ಲಿ ಸಿಕ್ಕ ಲಾರಿಯನ್ನು ಹೊರ ತೆಗೆಯಲಾಯಿತು.