News Karnataka Kannada
Monday, April 29 2024
ಶಿವಮೊಗ್ಗ

ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ; ಗೃಹ ಸಚಿವ ಆರಗ ಜ್ಞಾನೇಂದ್ರ

Araga Jnanendra
Photo Credit :

ಶಿವಮೊಗ್ಗ : ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಕಾಲೇಜು ಅಡಳಿತ ಮಂಡಳಿ ನಿರ್ಧಾರ ಮಾಡಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಆದೇಶ ಹೊರಡಿಸಿದ್ದು, ಇದನ್ನು ಎಲ್ಲರೂ ಪಾಲನೆ ಮಾಡಬೇಕು ಅಂತ ಹೇಳಿದರು.

ಇದೇ ವೇಳೇ ಅವರು ತಮ್ಮ ಮಾತನ್ನು ಮುಂದುವರೆಸಿ, ಧರ್ಮವನ್ನು ಮೀರಿ ಭಾರತ ಮಾತೆಯ ಮಕ್ಕಳು ಎನ್ನುವ ಮನೋಭಾವನೆಯನ್ನು ಮಕ್ಕಳಲ್ಲಿ ನಾವು ನಿರ್ಮಾಣ ಮಾಡಬೇಕಾಗಿದೆ. ಇಂತಹುವುದು ಸಿಗುವುದು ಅದು ಶಾಲೆಯಲ್ಲಿ, ಈ ನಿಟ್ಟಿನಲ್ಲಿ ಯೂನಿಫಾರಂ ಸಮಾನತೆಯ ಸಂಕೇತ ಶಾಲಾ ಕಾಲೇಜುಗಳಲ್ಲಿ ಸಮಾನತೆ ಸಾರುವ ಕೆಲಸ ಆಗಬೇಕು ಅಂತ ಅವರು ಮನವಿ ಮಾಡಿಕೊಂಡರು. ಇದೇ ವೇಳೆ ಅವರು ಮಾತನಾಡಿ, ಈ ಹಿಂದೆ ಹಿಜಾಬ್‌ಗೆ ಧರಿಸುವಿಕೆ ಬಗ್ಗೆ ಈ ಮಟ್ಟಿನ ಒಲವು ಇರಿಲಿಲ್ಲ, ಈಗ ಮಕ್ಕಳು ಕಡ್ಡಾಯವಾಗಿ ನಾವು ಹಿಜಾಬ್ ಧರಿಸಿ ಬರುತ್ತೇನೆ ಅಂತ ಹೇಳುತ್ತಿರುವುದು ಅನುಮಾನಿಗಳಿಗೆ ಕಾರಣವಾಗಿದೇ, ಇದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ಕಂಡು ಹಿಡಿಯುವ ಸಲುವಾಗಿ ತನಿಖೆ ನಡೆಸಲು ಪೋಲಿಸರಿಗೆ ಸೂಚನೆ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು