News Karnataka Kannada
Tuesday, April 30 2024
ಶಿವಮೊಗ್ಗ

ಕೆರೆಗೆ ಉರುಳಿದ ಬಸ್‌ ; ಓರ್ವ ಪ್ರಯಾಣಿಕ ಸಾವು

Shimoga Bus Accident
Photo Credit :

ಶಿವಮೊಗ್ಗ, ; ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಒಬ್ಬ ಪ್ರಯಾಣಿಕರು ಮೃತಪಟ್ಟಿದ್ದಾರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿ 27 ಜನರಿದ್ದ ಕೆಎಸ್ಆರ್‌ಟಿಸಿ ಬಸ್ ಕೆರೆಗೆ ಉರುಳಿದೆ. ಪೊಲೀಸರು, ಅಗ್ನಿ ಶಾಮಕ ದಳ ಮತ್ತು ಸ್ಥಳೀಯರು ತಕ್ಷಣಾ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಪ್ರಯಾಣಿಕರನ್ನು ಬಸ್‌ನಿಂದ ಮೇಲೆ ಕರೆ ತಂದರು.
ಎದುರಿನಿಂದ ಬಂದ ಬೈಕ್‌ಗೆ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ರಸ್ತೆಯ ಪಕ್ಕದಲ್ಲಿದ್ದ ಕೆರೆಗೆ ಉರುಳಿದೆ. ಅಪಘಾತದಲ್ಲಿ ಶಿವಮೊಗ್ಗದ ಗುರುಪುರದ ನಿವಾಸಿ 35 ವರ್ಷದ ದೀಪಕ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ದೀಪಕ್ ಮತ್ತು ಶಬರೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿತ್ತು. ಮಾರ್ಗ ಮಧ್ಯೆ ದೀಪಕ್ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಚಿಕ್ಕಪುಟ್ಟಗಾಯಗಳಾಗಿದ್ದ ಪ್ರಯಾಣಿಕರಿಗೆ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಗರ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕಾರ ನೀಡಿದರು. ಪ್ರಕರಣದ ಬಗ್ಗೆ ತನಿಖೆಯನ್ನು ಸಹ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು