ಶಿವಮೊಗ್ಗ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ. ಈಗಾಗಲೇ ನಾಲ್ಕೈದು ಆರೋಪಿಗಳ ಸುಳಿವು ಸಿಕ್ಕಿದೆ. ಪೊಲೀಸರು ಬಂಧಿಸಲಿದ್ದಾರೆ. ಘಟನೆ ಬಳಿಕ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಕಾನೂನು ಮೂಲಕವೇ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುವುದು ಎಂದರು.
ಶಿವಮೊಗ್ಗದ ನಗರದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ಸೀಗೆಹಟ್ಟಿಯ ಹರ್ಷಶೆಟ್ಟಿ (22) ಎಂಬ ಯುವಕನನ್ನು ದುಷ್ಕರ್ಮಿಗಲು ಹತ್ಯೆ ಮಾಡಿದ್ದಾರೆ.