News Karnataka Kannada
Monday, April 29 2024
ಶಿವಮೊಗ್ಗ

ಕೋಮು ಸೌಹಾರ್ದತೆ ಹಾಳು ಮಾಡುವವರ ಮೇಲೆ ಉಗ್ರವಾದ ಕ್ರಮ; ಬಿ.ಎಸ್.ಯಡಿಯೂರಪ್ಪ

Shimoga: Priyank Kharge has committed an unpardonable crime without an apology, says BS Yediyurappa Yediyurappa
Photo Credit :

ಶಿವಮೊಗ್ಗ : ಹುಬ್ಬಳ್ಳಿ ಗಲಭೆಗೆ ಕಾರಣರಾದವರ ಬಹುತೇಕರ ಬಂಧನವಾಗಿದೆ. ಸಮಗ್ರವಾಗಿ ತನಿಖೆ ಆಗಬೇಕು. ಗಲಭೆ ಉಂಟು ಮಾಡುವವರು, ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡುವವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ ಕ್ರಮ ಕೈಗೊಂಡು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು.

ಪೊಲೀಸರ ಮೇಲೆ, ಪೊಲೀಸ್ ವಾಹನದ ಮೇಲೆ ಹಲ್ಲೆ ಮಾಡಿದ್ದಾರೆಂದರೆ ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎಂದು ತಿಳಿಯುತ್ತದೆ. ನಮ್ಮ ರಕ್ಷಣೆ ಮಾಡುವ ಪೊಲೀಸರ ಮೇಲೆ ಕೈ ಮಾಡುವುದು, ಠಾಣೆಗೆ ನುಗ್ಗುವ ಪ್ರಯತ್ನ ಮಾಡುವುದು ಅಕ್ಷಮ್ಯ ಅಪರಾಧ. ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಬಿಎಸ್ ವೈ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು