News Karnataka Kannada
Tuesday, April 30 2024
ಶಿವಮೊಗ್ಗ

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

Skill Development
Photo Credit : News Kannada

ಶಿವಮೊಗ್ಗ : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ಶಿವಮೊಗ್ಗ ಇಲ್ಲಿ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ (ಸಿಎಂಕೆಕೆವೈ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಎಲ್ಲ ವರ್ಗದ ನಿರುದ್ಯೋಗ ಯುವಕ/ಯುವತಿರಿಗೆ ಕೌಶಲ್ಯಾಭಿವೃದ್ದಿ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವವರಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ ಹಾಗೂ ಐಟಿಐ/ಡಿಪ್ಲೊಮಾ ಆದವರಿಗೆ ಸಿಎನ್‍ಸಿ ಆಪರೇಟರ್– ವರ್ಟಿಕಲ್ ಮಷಿನಿಂಗ್ ಸೆಂಟರ್ ತರಬೇತಿಯನ್ನು ನೀಡಲಾಗುವುದು. ಪ.ಜಾತಿ ಮತ್ತು ಪ.ಪಂಗಡದವರಿಗೆ ಮಾತ್ರ ತರಬೇತಿ ಅವಧಿಯಲ್ಲಿ ರೂ.2500 ಶಿಷ್ಯವೇತನ ನೀಡಲಾಗುವುದು.

ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿಗಳು ಹಾಗೂ ವೈಯಕ್ತಿಕ ವಿವರಗಳೊಂದಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಗೆ ಅರ್ಜಿಯನ್ನು ಮಾರ್ಚ್ 05 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08182-246054, 9429530914, 9448307027, 9449286543 ಇಲ್ಲಿಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು