News Karnataka Kannada
Wednesday, May 01 2024
ಶಿವಮೊಗ್ಗ

ಗೃಹಸಚಿವ ಅರಗ ಜ್ಞಾನೆಂದ್ರ ವಿರುದ್ಧ- ಯುವ ಕಾಂಗ್ರೆಸ್ ನಿಂದ  ದೂರು ದಾಖಲು

Aaraga
Photo Credit :

ಕರ್ನಾಟಕ ರಾಜ್ಯದ ‘ಗೃಹ ಮಂತ್ರಿಯಾದ “ಆರಗ ಜ್ಞಾನೇಂದ್ರ’ರವರು “ಜಾತಿ-ಧರ್ಮಗಳ ನಡುವೆ ಕೋಮು ಗಲಭೆ ಸೃಷ್ಟಿಸುವ ನಿಟ್ಟಿನಲ್ಲಿ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ತದನಂತರ ನನ್ನ ಹೇಳಿಕೆ ತಪ್ಪಾಗಿದೆ ನಾನು ತಪ್ಪು ಅರ್ಥೈಸಿಕೊಂಡಿದ್ದೇನೆ ಎಂದು ಸಬೂಬು ಹೇಳುತ್ತಿದ್ದಾರೆ.

ಜವಾಬ್ದಾರಿಯುತ ಸ್ಥಾನದಲ್ಲಿ ಸಚಿವರಾದ ಅರಗ ಜ್ಞಾನೇಂದ್ರ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಬಿಟ್ಟು ಬಿಜೆಪಿಯ ಹೈಕಮಾಂಡ್ ಅನ್ನು ಮೆಚ್ಚಿಸಲು ಈ ರೀತಿಯ ಇಲ್ಲಸಲ್ಲದ ಪೂರಕವಲ್ಲದ ಹೇಳಿಕೆಗಳನ್ನು ನೀಡಿ ತದನಂತರ ತಪ್ಪಾಗಿದೆ ಎಂದು ಹೇಳುತ್ತಿರುವುದು ತೀವ್ರವಾಗಿ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಜಯನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರಿಗೆ ದೂರು ನೀಡಲಾಯಿತು

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ , ದಕ್ಷಿಣ ಬ್ಲಾಕ್ ಎಸ್ ಕುಮರೇಶ್ , ಗ್ರಾಮಾಂತರ ಅಧ್ಯಕ್ಷ ಇ. ಟಿ ನಿತಿನ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ರಾಕೇಶ್ , ಪದಾಧಿಕಾರಿಗಳಾದ ಪವನ್, ದರ್ಶನ್ , ಶ್ರೀನಿವಾಸ್, ಗಜ, ವೆಂಕಟೇಶ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು