ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಕಮಾಂಡ್ ಆಸ್ಪತ್ರೆ ಬೆಂಗಳೂರು ಇಲ್ಲಿಗೆ ಭಾನುವಾರ ಭೇಟಿ ನೀಡಿ ತಮಿಳುನಾಡಿನ ಕುನೂರ್ ಸಮೀಪ ಸಂಭವಿಸಿದ ಹೆಲಿಕಾಪ್ಟರ್ ಪತನ ಘಟನೆಯಲ್ಲಿ ಬದುಕುಳಿದು, ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಆರೋಗ್ಯ ವಿಚಾರಿಸಿದರು.
ವರುಣ್ ಸಿಂಗ್ ಅವರ ತಂದೆ ಹಾಗೂ ತಾಯಿಯವರನ್ನೂ ಜ್ನಾನೇಂದ್ರ ಭೇಟಿ ಮಾಡಿದರು. ಸಿಂಗ್ ಅವರು ಶೀಘ್ರ ಗುಣಮುಖವಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ ಸಚಿವರು, ಕರ್ನಾಟಕ ಸರಕಾರವು ಹೆಚ್ಚಿನ ಚಿಕಿತ್ಸೆಯೂ ಸೇರಿದಂತೆ ಎಲ್ಲ ರೀತಿಯ ಸಹಾಯ ಹಾಗೂ ನೆರವು ನೀಡಲು ಬದ್ದವಾಗಿದೆ ಎಂದು ಭರವಸೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು