News Karnataka Kannada
Thursday, May 02 2024
ಶಿವಮೊಗ್ಗ

ಜೋಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Death Body 08082021
Photo Credit :

ಶಿವಮೊಗ್ಗ : ಸಾಗರ ತಾಲ್ಲೂಕಿನ ಜೋಗದಲ್ಲಿ ಮನೆಯ ಸಮೀಪ ಇರುವಂತ ಮರವೊಂದಕ್ಕೆ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದ ನಿವಾಸಿ ಗಂಗಾಧರ್ (38) ಎಂಬುವರು, ಮನೆಯ ಸಮೀಪವೇ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದಂತ ಗಂಗಾಧರ್ ಮದ್ಯ ವ್ಯಸನಿಯಾಗಿದ್ದು, ನಿನ್ನೆ ಭಾನುವಾರ ರಾತ್ರಿ ವಿಪರೀತ ಕುಡಿದು ಬಂದು ಪತ್ನಿ, ಮಕ್ಕಳ ಮೇಲೆ ಹಲ್ಲೆ ಕೂಡ ನಡೆಸಿದ್ದರು. ಈ ಬಳಿಕ ಮನೆಯ ಸಮೀಪದ ಮರದ ಬಳಿ ತೆರಳಿ, ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ.

ಸ್ಥಳಕ್ಕೆ ಪಿಎಸ್‌ಐ ನಿರ್ಮಲಾ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು