ಶಿವಮೊಗ್ಗ : 2023ರ ಡಿಸೆಂಬರ್ನೊಳಗೆ ತುಮರಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ತಾಲ್ಲೂಕಿನ ಅಂಬಾರಗೋಡ್ಲುವಿನಿಂದ ಕಳಸವಳ್ಳಿ ಶರಾವತಿ ಹಿನ್ನೀರಿನ ನಡುವೆ ನಿರ್ಮಾಣಗೊಳ್ಳುತ್ತಿರುವ ತುಮರಿ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಹಿನ್ನೀರಿನಲ್ಲಿ ನೀರು ಸಂಗ್ರಹ ಪ್ರಮಾಣ ಜಾಸ್ತಿ ಇರುವುದರಿಂದ ಕೆಲಸ ಮಾಡಲು ತೊಂದರೆಯಾಗುತ್ತಿದೆ ಎಂದರು.
ನೀರು ಸಂಗ್ರಹ ಪ್ರಮಾಣ ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಚಿಂತನೆ ನಡೆಸಲಾಗಿದೆ. ಲಿಂಗನಮಕ್ಕಿ, ಶರಾವತಿ ಇನ್ನಿತರೆ ವಿದ್ಯುದಾಗಾರಗಳಲ್ಲಿ ಜಲವಿದ್ಯುತ್ ಉತ್ಪಾದನೆಯನ್ನು ಜಾಸ್ತಿಗೊಳಿಸುವ ಮೂಲಕ ಭವಿಷ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ತೊಂದರೆಯಾಗದಂತೆ ನೀರು ಸಂಗ್ರಹ ಕಡಿಮೆ ಮಾಡುವ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸಿ, ಸಮಯಕ್ಕೆ ಸರಿಯಾಗಿ ಸೇತುವೆ ನಿರ್ಮಾಣ ಕಾಮಗಾರಿ ಮುಗಿಸುವ ಬಗ್ಗೆ ಗಮನ ಹರಿಸಲಾಗುತ್ತದೆ. ನಿರ್ಮಾಣ ಸಂದರ್ಭದಲ್ಲಿ ಏನೇ ಸಮಸ್ಯೆ ಎದುರಾದರೂ ಶಾಸಕರ ಮೂಲಕ ನನ್ನ ಗಮನಕ್ಕೆ ತನ್ನಿ, ತಕ್ಷಣ ಬಗೆಹರಿಸುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು.
ತುಮರಿ ಸೇತುವೆ ಕಾಮಗಾರಿಪೂರ್ಣಗೊಳಿಸಲು ಸೂಚನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.