ಶಿವಮೊಗ್ಗ : ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ – ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ.
ಕಾಂಗ್ರೆಸ್ ಪಕ್ಷದ ಅಧಿನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಅನಾಗರಿಕ ಸಂಸ್ಕೃತಿಯ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ಜೋಕರ್ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು.
ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ. ಈ ಕೂಡಲೇ ನಳಿನ್ ಕುಮಾರ್ ಕಟೀಲ್ ನನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.