News Karnataka Kannada
Friday, May 03 2024
ಶಿವಮೊಗ್ಗ

ನಾನು ಕೂಡ ಎಂ.ಪಿ ನೀವೂ ಕೂಡ ಎಂಪಿ : ಸಂಸದ ಬಿ. ವೈ. ರಾಘವೇಂದ್ರ

By Raghavendra
Photo Credit :

ಶಿಕಾರಿಪುರ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಭಿನ್ನ ಶೈಲಿಯಲ್ಲಿ ಜನರಿಗೆ ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡಿದೆ. ರಾಜ್ಯದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಅನೇಕ ಜನಪರ ಕೆಲಸವನ್ನು ಮಾಡಿದ್ದಾರೆ. ಅಭಿರುದ್ಧಿಗಾಗಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ್ ಅವರನ್ನು ಭಾರಿ ಅಂತರದಲ್ಲಿ ಗೆಲ್ಲಿಸೋಣ, ನಾನು ಕೂಡ ಮೆಂಬರ್ ಆಫ್ ಪಾರ್ಲಿಮೆಂಟ್ ನೀವೂ ಮೆಂಬರ್ ಆಫ್ ಪಂಚಾಯತ್ (ಎಂ.ಪಿ )ಆಗಿದ್ದೀರ ಎಲ್ಲರು ಒಟ್ಟಿಗೆ ಸೇರಿ ಪಕ್ಷವನ್ನು ಬಲ ಪಡಿಸೋಣ ಎಂದು ಸಂಸದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.

ಶಿಕಾರಿಪುರದ ಕುಮುದ್ವತಿ ಕಾಲೇಜಿನಲ್ಲಿ ಶಿಕಾರಿಪುರ ಮಂಡಲದಲ್ಲಿ ವಿಧಾನ ಪರಿಷತ್ ಚುನಾವಣೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರಚಾರ ಸಭೆನ್ನು ಉದ್ಘಾಟಿಸಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾದ ಡಿ.ಎಸ್ ಅರುಣ್ ಅವರ ಪರ ಮತಯಾಚಿಸಿದರು.

ಈ ದೇಶದಲ್ಲಿ ಕಾಂಗ್ರೆಸ್ ಸಾಧ್ಯವೇ ಇಲ್ಲ ಆದರೆ ಕರ್ನಾಟಕದಲ್ಲಿ ಮಾತ್ರ ಸ್ವಲ್ಪ ಉಸಿರಾಡುತ್ತಿದೆ ಆ ಪಕ್ಷದ ಕೆಲ ನಾಯಕರು ಸೊಕ್ಕಿನ, ಧಿಮಾಕಿನ ಮಾತುಗಳನ್ನಾಡುತ್ತಿದ್ದಾರೆ,ಇದಕ್ಕೆ ಉತ್ತರವನ್ನು ಕೊಡಲು ಅಭ್ಯರ್ಥಿ  ಡಿ.ಎಸ್ ಅರುಣ್ ಅವರನ್ನು ಸಲ್ಲಿಸುವುದರ ಮೂಲಕ ಉತ್ತರ ಕೊಡಲು ಸಾಧ್ಯ.  ಸರಳ ಸಜ್ಜನಿಕೆಯ ಪ್ರಾಮಾಣಿಕ ವ್ಯಕ್ತಿ ಡಿ ಎಸ್ ಅರುಣ್ ಅವರಿಗೆ ಮತ ನೀಡಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಹೇಳಿದ್ದಾರೆ.

ಅವರು ಇಂದು ಶಿಕಾರಿಪುರದ ಮಂಡಳದ ವತಿಯಿಂದ ಶಿಕಾರಿಪುರದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಪುರಸಭೆ ಸದಸ್ಯರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಡಿ ಎಸ್ ಅರುಣ್ ಅವರು ಮೊದಲನೇ ಸುತ್ತಿನಲ್ಲಿ ವಿಜಯವನ್ನು ನಡೆಸುತ್ತಾರೆ,ಅವರು ಅತಿ ಹೆಚ್ಚು ಮತಗಳಿಂದ ಜಯ ಸಾಧಿಸಿಸಲು ನಮ್ಮ ಪಕ್ಷದ ಬೆಂಬಲಿತ ಸದಸ್ಯರು ಮತ್ತು ಪಟ್ಟಣ ಪಂಚಾಯಿತಿ ಸದಸ್ಯರುಗಳು ಅನ್ಯಪಕ್ಷದ ಮತ್ತು ಪಕ್ಷೇತರ ಅಭ್ಯರ್ಥಿಗಳನ್ನು ನಮ್ಮ ಪಕ್ಷಕ್ಕೆ ಮತ ನೀಡುವಂತೆ ನೋಡಿಕೊಳ್ಳಬೇಕು ಈ ರೀತಿ ಮಾಡಿದರೆ ನಾವು ಪಕ್ಷಕ್ಕೆ ದೊಡ್ಡ ಕೊಡುಗೆಯನ್ನು ನೀಡಬಹುದು ಎಂದರು.

ರಾಜ್ಯದಲ್ಲಿ ನಾವು 15 ಹದಿನೈದಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಆದ್ದರಿಂದ ಪರಿಷತ್ ಸದಸ್ಯರ ಸಂಖ್ಯೆ ಬಿಜೆಪಿ ಪಕ್ಷ ಹೆಚ್ಚಿಸಲಿದೆ,ಶಿಕಾರಿಪುರಕ್ಕೆ ಮತ್ತು ರಾಜ್ಯಕ್ಕೆ ನಾನು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ನೀಡಿದ ಅನೇಕ ಜನಪರ ಕಾರ್ಯಗಳು ಮತ್ತು ಅಭಿವದ್ಧಿ ಯೋಜನೆಗಳಿಂದ ನಾವು ಗೆಲುವು ಸಾಧಿಸಲು ಸಾಧ್ಯ ನಮ್ಮ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸಲು 2023 ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳಲಾಗುವುದು ಎಂದರು

ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು. ಶಾಸಕರಾದ ಅಶೋಕ್ ನಾಯ್ಕ್, ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯರಾದ ರುದ್ರೇಗೌಡರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಮೇಘರಾಜ್. ತಾಲೂಕು ಅಧ್ಯಕ್ಷರಾದ ವೀರೇಂದ್ರ ಪಾಟೀಲ್. ಎಂ. ಎ. ಡಿ. ಬಿ ಅಧ್ಯಕ್ಷರಾದ ಗುರುಮೂರ್ತಿ ಮತ್ತು ಪಕ್ಷದ ಪ್ರಮುಖ ಮುಖಂಡರು ಮತ್ತಿತರು ಉಪಸ್ಥಿತರಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು