News Karnataka Kannada
Sunday, May 05 2024
ಶಿವಮೊಗ್ಗ

ಪಕ್ಷಕ್ಕೆ ಇರುಸು-ಮುರುಸು ಉಂಟಾಗಬಾರದು : ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ

K'taka police gives clean chit to ex-minister Eshwarappa in contractor's suicide case
Photo Credit :

ಶಿವಮೊಗ್ಗ: ಪಕ್ಷಕ್ಕೆ ಇರುಸು-ಮುರುಸು ಉಂಟಾಗಬಾರದು ಎಂಬ ಕಾರಣಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸಂಜೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಸಚಿವ ಸ್ಥಾನಕ್ಕೆ ಶುಕ್ರವಾರ ಸಂಜೆ ರಾಜೀನಾಮೆ ನೀಡುತ್ತೇನೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರ ಹಸ್ತಾಂತರಿಸುತ್ತೇನೆ ಎಂದು ಪ್ರಕಟಿಸಿದರು.

ರಾಜೀನಾಮೆ ನೀಡುವ ಬಗ್ಗೆ ಈ ಎಪಿಸೋಡ್ ಆರಂಭದಲ್ಲೇ ನಿರ್ಧಾರ ಮಾಡಿದ್ದೆ. ಆದರೆ ಪಕ್ಷದ ಹಿರಿಯರು ಬೇಡ ಎಂದು ಸೂಚನೆ ನೀಡಿದ್ದರು.

ನನಗೆ ಆಶೀರ್ವಾದ ಮಾಡುತ್ತಾ ಬಂದಿರುವ ಹಿರಿಯರಿಗೆ, ರಾಷ್ಟ್ರೀಯ ನಾಯಕರಿಗೆ ಇರುಸು-ಮುರುಸು ಆಗರಬಾರದು ಎಂಬ ಒಂದೇ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿದ್ದೇನೆ. ಇದು ಸ್ವಯಂ ತೆಗೆದುಕೊಂಡ ನಿರ್ಧಾರ. ಇದರ ಬಗ್ಗೆ ಮುಖ್ಯಮಂತ್ರಿಗಳಿಗೂ ತಿಳಿಸಿದ್ದೇನೆ ಎಂದರು.

ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿದ್ದರೆ ಭಗವಂತ ನನಗೆ ಶಿಕ್ಷೆ ಕೊಡಲಿ. ಈ ಎಪಿಸೋಡಿನಲ್ಲಿ ನಿರ್ದೋಷಿಯಾಗಿ ಹೊರಬರುವ ಪೂರ್ಣ ವಿಶ್ವಾಸ ಇದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು