ಶಿವಮೊಗ್ಗ: ಉಪ್ಪಿನಂಗಡಿಯಲ್ಲಿ ಪಿಎಫ್ಐ ನಾಯಕರ ಅಕ್ರಮ ಬಂಧನ ಪ್ರಶ್ನಿಸಿ, ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾಧ್ಯಕ್ಷರಾದ ಸೈಯದ್ ರಿಜ್ವಾನ್ ಮಾತನಾಡಿ ಶಾಂತಿಯುತ ಪ್ರತಿಭಟನಾಕಾರರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ ಪರಿಣಾಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹಾಗೂ ಹಲ್ಲೆ ನಡೆಸಿ ಹೇಯ ಕೃತ್ಯವೆಸಗಿದ ಪೊಲೀಸ್ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಕೂಡಲೇ ಅಮಾನತ್ತುಗೊಳಿಸಬೇಕೆಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ರಿಜ್ವಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಮರ್ ಫಾರೂಕ್, ಹಾಗೂ ಜಿಲ್ಲಾ ನಾಯಕರಾದ ಶಾಹಿದ್ ಖಾನ್ ಮತ್ತು ಅನೇಕ ಕಾರ್ಯಕರ್ತರು, ಸಾರ್ವಜನಿಕರು ಹಾಜರಿದ್ದರು