News Karnataka Kannada
Saturday, May 04 2024
ಶಿವಮೊಗ್ಗ

ಪ್ರಧಾನಿ ಮೋದಿ ಹುಟ್ಟುಹಬ್ಬ ; ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಣಕು ಪ್ರತಿಭಟನೆ

New Project 2021 09 17t155023.098
Photo Credit :

ಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು ವರ್ಷಗಳ ಅಧಿಕಾರ ನಡೆಸಿ ಯುವಕರಿಗೆ ಯಾವುದೇ ಉದ್ಯೋಗದ ಭರವಸೆಗಳನ್ನು ನೀಡುತ್ತಿರುವ ಉದ್ಯೋಗಗಳನ್ನು ಭರ್ತಿ ಮಾಡದೆ ಯುವಕರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಅಶೋಕ್ ವೃತ್ತದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಪಕೋಡ ಹಣ್ಣು ತರಕಾರಿ ಹೂವು ಮಾರಾಟ ಮಾಡುವ ಅಣಕು ಪ್ರದರ್ಶನದ ಮೂಲಕ ಯುವಕರ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿಗೆ ನಿರುದ್ಯೋಗದ ದಿನಾಚರಣೆಯ ಶುಭಾಶಯಗಳು ಕೋರುತ್ತಾ ಈಗಾಗಲೇ ಯುವಕರಿಗೆ ಚುನಾವಣೆ ಸಂದರ್ಭದಲ್ಲಿ ಮಂಕುಬೂದಿ ಹಚ್ಚಿ ಅಧಿಕಾರಕ್ಕೆ ಬಂದ ನೀವು ಯುವಕರಿಗೆ ಉದ್ಯೋಗ ನೀಡುವುದನ್ನು ಬಿಟ್ಟು ಕೋಮುಭಾವನೆಗಳ ವಿಚಾರವಾಗಿ ಯುವಕರನ್ನು ದಾರಿ ತಪ್ಪಿಸಿ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಸರಿಸುಮಾರು ಶೇಕಡ ಹತ್ತರಷ್ಟು ಏರಿಕೆ ಮಾಡುತ್ತಾ ದೇಶದ ಯುವಕರು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಹೊರಟರೆ ಅಲ್ಲಿಯೂ ಸಹ ಸರ್ಕಾರ ಯಾವುದೇ ಯೋಜನೆಗಳನ್ನು ರೂಪಿಸಿದೆ , ಸರ್ಕಾರವನ್ನು ಪ್ರಶ್ನೆ ಮಾಡುವ ಯುವಕರ ಮೇಲೆ ಕೇಸುಗಳನ್ನು ದಾಖಲಿಸುವ ಮುಖಾಂತರ ಸರ್ವಾಧಿಕಾರಿ ಧೋರಣೆಯ , ಯುವಕ ವಿರೋಧಿ ಸರ್ಕಾರಯಾಗಿದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು