News Karnataka Kannada
Friday, May 03 2024
ಶಿವಮೊಗ್ಗ

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ

Local News
Photo Credit :

ಶಿವಮೊಗ್ಗ : ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನಾಕಾರರು ಬಿಹೆಚ್ ರಸ್ತೆಯಲ್ಲಿರುವ ಶಿವಪ್ಪನಾಯಕ ಪ್ರತಿಮೆಯಿಂದ ಮೆರವಣಿಗೆ ಆರಂಭಿಸಿ ಎಎ ಸರ್ಕಲ್, ಗೋಪಿ ಸರ್ಕಲ್ ಮೂಲಕ ಮಹಾವೀರ ಸರ್ಕಲ್ ತಲುಪಿ ನಂತರ ಪ್ರತಿಭಟನಾ ಸಭೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವೈಜ್ಞಾನಿಕ ನೀತಿ ಜಾರಿಗೆ ತಂದಿರುವುದರಿಂದ ತೈಲ, ಗ್ಯಾಸ್ ಸಿಲಿಂಡರ್, ಅಗತ್ಯ ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರ ಪಂಪ್ ಸೆಟ್ ಗೂ ಕೂಡ ವಿದ್ಯುತ್ ಇಲ್ಲವಾಗಿದೆ. ಶ್ರೀ ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಇದರ ಪರಿಣಾಮ ದಿನನಿತ್ಯದ ಬದುಕಿನ ಮೇಲೂ ಕೂಡ ಪರಿಣಾಮ ಬೀರುತ್ತದೆ.

ಬಡವರ ಬದುಕು ದಿನದಿಂದ ದಿನಕ್ಕೆ ದುಸ್ತರಗೊಂಡಿದೆ ಎಂದು ಪ್ರತಿಭಟನಾಕಾರರು ದೂರಿದರು.ಕೇವಲ 15 ದಿನದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ 103 ರೂ. ಏರಿಕೆಯಾಗಿದೆ. ಸಬ್ಸಿಡಿ ಕೂಡ ಇಲ್ಲವಾಗಿದೆ. ವಿದ್ಯುತ್ ದರ ಅಗತ್ಯಕ್ಕಿಂತ ಹೆಚ್ಚಾಗಿದೆ. ಅಡುಗೆ ಎಣ್ಣೆ, ಬೇಳೆ, ಕಾಳು, ತರಕಾರಿ ಇವೆಲ್ಲಾ ಏರಿಕೆಯಾಗಿದ್ದು, ಅನೇಕ ಬಡವರು ಒಪ್ಪೊತ್ತಿನ ಊಟ ಮಾಡುತ್ತಿದ್ದಾರೆ. ಇಷ್ಟಾದರೂ ಬಿಜೆಪಿ ಸರ್ಕಾರ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಭಾವನಾತ್ಮಕ ವಿಚಾರಗಳತ್ತ ಜನರನ್ನು ದಿಕ್ಕು ತಪ್ಪಿಸುತ್ತಿದೆ. ರೈತರಂತೂ ಕಂಗಾಲಾಗಿ ಹೋಗಿದ್ದಾರೆ. ಬೆಳೆ ಹಾನಿ ಪರಿಹಾರವೂ ಇಲ್ಲ. ವೈಜ್ಞಾನಿಕ ಬೆಲೆಯೂ ಇಲ್ಲವಾಗಿದೆ. ಅತಿ ಅವಶ್ಯಕವಾಗಿರುವ ಬಟ್ಟೆಯ ಮೇಲೂ ಜಿ.ಎಸ್.ಟಿ. ವಿಧಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಬೆಲೆಯನ್ನು ನಿಯಂತ್ರಣದಲ್ಲಿಡಬೇಕು.

ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು. ರೈತರ ಪಂಪ್ ಸೆಟ್ ಗೆ ವಿದ್ಯುತ್ ನೀಡಬೇಕು. ಯಶಸ್ವಿನಿ ಯೋಜನೆ ಪುನಾರಂಭಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ತೀವ್ರ ಹೋರಾಟವನ್ನು ಆರಂಭಿಸಲಾಗುತ್ತದೆ. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅಮೇಥಿಯಲ್ಲಿ ಕೈಗೊಂಡಿರುವ ಪಾದಯಾತ್ರೆ ಬೆಂಬಲಿಸಿ ಈ ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು