ಶಿವಮೊಗ್ಗ: ಇಂದು ರಾಜ್ಯಾಧ್ಯಂತ ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಇಂದು ಒಬ್ಬರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಡುವ ಮೂಲಕ, ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ರೂಪಾಂತರಿ ಸೋಂಕಿನ ಪ್ರಕರಣ ವರದಿಯಾಗಿದೆ. ಈ ಮೂಲಕ ಮಲೆನಾಡಿಗೂ ಓಮಿಕ್ರಾನ್ ವೈರಸ್ ಕಾಲಿಟ್ಟಂತೆ ಆಗಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲಿ ಇಂದು ಮತ್ತೆ ಐವರಿಗೆ ಓಮಿಕ್ರಾನ್ ವೈರಸ್ ತಗುಲಿರೋದು ದೃಢಪಟ್ಟಿದೆ.
ಅವರಲ್ಲಿ ಧಾರವಾಡದ 54 ವರ್ಷದ ವ್ಯಕ್ತಿ, ಭದ್ರಾವತಿಯ 20 ವರ್ಷದ ಮಹಿಳೆ, ಉಡುಪಿಯ 82 ವರ್ಷದ ವ್ಯಕ್ತಿ ಮತ್ತು 73 ವರ್ಷದ ಮಹಿಳೆ ಹಾಗೂ ಮಂಗಳೂರಿನ 19 ವರ್ಷದ ಮಹಿಳೆ ಸೇರಿದ್ದಾರೆ ಎಂದು ತಿಳಿಸಿದ್ದಾರೆ.