News Karnataka Kannada
Saturday, May 04 2024
ಶಿವಮೊಗ್ಗ

ಭೀಕರ ಅಪಘಾತ: ಟಾಟಾಏಸ್ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗದ ತಿರುಮಲ ಡಾಬಾ ಬಳಿ ಕಾರು-ಲಾರಿ ಮಧ್ಯೆ ಅಪಘಾತ ಸಂಭವಿಸಿ ಕೃಷಿ ಇಲಾಖೆ ನೌಕರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
Photo Credit :

ಶಿವಮೊಗ್ಗ : ಕಾರ್ಯಕ್ರಮವೊಂದಕ್ಕೆ ತೆರಳಿ, ಮರಳಿ ಗ್ರಾಮಕ್ಕೆ ತೆರಳುತ್ತಿದ್ದಂತ ಟಾಟಾಏಸ್ ವಾಹನವೊಂದು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿರೋ ಘಟನೆ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ತವನಂದಿ ಗ್ರಾಮದ ಜನರು, ಸಾಗರ ಸಮೀಪದ ಗುತ್ತನಹಳ್ಳಿ ಗ್ರಾಮದಲ್ಲಿ ನಡೆದಂತ ಕಾರ್ಯಕ್ರಮಕ್ಕೆ ಟಾಟಾಏಸ್ ನಲ್ಲಿ ತೆರಳಿ, ಭೋಜನದ ಬಳಿಕ, ತಮ್ಮ ತವನಂದಿ ಗ್ರಾಮಕ್ಕೆ ವಾಪಾಸ್ ಆಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೊರಬ ತಾಲೂಕಿನ ಚಿತ್ರಟ್ಟಹಳ್ಳಿ ಗ್ರಾಮದ ಬಳಿ ಮರಕ್ಕೆ ಡಿಕ್ಕಿಯಾಗಿದೆ.

ಟಾಟಾ ಏಸ್ ಮರಕ್ಕೆ ಡಿಕ್ಕಿಯಾದ ಪರಿಣಾಮ, ತವನಂದಿ ಗ್ರಾಮದ ಯೋಗರಾಜಪ್ಪ ನಿಂಗಪ್ಪ (57), ತಿಮ್ಮಪ್ಪ ಈರಪ್ಪ (45) ಹಾಗೂ ಆಕಾಶ್ ಹನುಮಂತಪ್ಪ (13) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವಂತ ಹಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು