News Karnataka Kannada
Tuesday, May 07 2024
ಶಿವಮೊಗ್ಗ

ಮತ ಎಣಿಕೆ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Mangaluru: Prohibitory orders imposed in five police station limits
Photo Credit :

ಶಿವಮೊಗ್ಗ : ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2021 ರ ಸಂಬಂಧ ಡಿಸೆಂಬರ್ 10 ರಂದು ಮತದಾನ ಕಾರ್ಯ ನಡೆದಿದ್ದು ಮತ ಎಣಿಕೆ ಕಾರ್ಯ ಡಿಸೆಂಬರ್ 14 ರಂದು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯಲಿದೆ.

ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹ್ಯಾದ್ರಿ ಕಾಲೇಜಿನ ವ್ಯಾಪ್ತಿಯಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 15 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಳಾದ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.

ನಿಷೇಧಾಜ್ಞೆ ವೇಳೆ ಮತ ಎಣಿಕೆ ಕೇಂದ್ರದ ಆವರಣದ ಹೊರಗೆ 100 ಮೀ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದು, ಪಟಾಕಿ ಹೊಡೆಯುವುದು, ಆಯುಧಗಳು, ಸ್ಪೋಟಕ ವಸ್ತುಗಳನ್ನು ಹೊಂದುವುದು, ಸಾಗಿಸುವುದನ್ನು ನಿಷೇಧಿಸಲಾಗಿದೆ.

ಹಾಗೂ ಮತಎಣಿಕೆ ಕೇಂದ್ರದ ಪರಿಮಿತಿ 1 ಕಿ.ಮೀ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಭಾರೀ ಪ್ರಮಾಣದಲ್ಲಿ ಜನ ಗುಂಪುಗಾರಿಕೆ/ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು