ಮೇಲು-ಕೀಳೆಂಬ ತಾರತಮ್ಯ ಹೋಗಲಾಡಿಸಲು ಪ್ರತಿಜ್ಞೆ ಮಾಡುವ ದಿನ : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಸಮಾಜದಲ್ಲಿರುವ ಮೇಲು-ಕೀಳೆಂಬ ತಾರತಮ್ಯವನ್ನು ಹೋಗಲಾಡಿಸಬೇಕೆಂದು ಡಾ.ಬಾಬು ಜಗಜೀವನ ರಾಮ್‍ರವರಂತಹ ಮಹಾನ್ ವ್ಯಕ್ತಿಗಳು ಕನಸು ಕಂಡಿದ್ದರು. ಅಂತಹ ಕನಸನ್ನು ನನಸು ಮಾಡುವ ಪ್ರತಿಜ್ಞೆ ತೆಗೆದುಕೊಳ್ಳುವ ದಿನ ಇದು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಕೆ.ಎಸ್.ಈಶ್ವರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಸಲಾಗಿದ್ದ ಡಾ.ಬಾಬು ಜಗಜೀವನ ರಾಮ್‍ರವರ 115 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಇಂದಿಗೂ ಸಮಾಜದಲ್ಲಿ ಮೇಲು ಕೀಳೆಂಬ ತಾರತಮ್ಯ ಇದೆ. ಯಾವ ಹಳ್ಳಿಗೆ ಹೋದರೂ ಮೇಲು, ಕೀಳು ವರ್ಗ ಎಂಬ ಪ್ರತ್ಯೇಕತೆಯನ್ನು ಕಾಣಬಹುದು. ಆದರೆ ಮೊದಲಿಗಿಂತ ಸಮಾಜದಲ್ಲಿ ಬಹಳಷ್ಟು ಸುಧಾರಣೆ ಆಗಿರುವುದು ನಿಜ. ಆದರೆ ಎಂದು ಸಮಾಜದಲ್ಲಿ ಸಂಪೂರ್ಣವಾಗಿ ಮೇಲು ಕೀಳೆಂಬ ತಾರತಮ್ಯ ಹೋಗುತ್ತದೆಯೋ ಅಂದು ನಿಜವಾದ ಸ್ವಾತಂತ್ರ್ಯ ಲಭಿಸಿದಂತೆ ಎಂದರು.

ಇಡೀ ದೇಶವನ್ನು ಸರಿಯಾದ ಧಿಕ್ಕಿನಲ್ಲಿ ನಡೆಸುವ ಪ್ರತಿಭೆಯನ್ನು ಹೊಂದಿದ್ದ ಡಾ.ಬಾಬು ಜಗಜೀವನರಾಮ್‍ರವರು ದೇಶದ ಪ್ರಧಾನಿ ಆಗಲಿಲ್ಲ ಎಂಬ ನೋವು ನನಗೆ ಕಾಡುತ್ತದೆ. ದೇಶದ ರೈತರು ಮತ್ತು ಇತರೆ ಹಿಂದುಳಿದ ವರ್ಗಗಳ ಹಸಿವಿನ ಬಗ್ಗೆ ಲೋಕಸಭೆಯಲ್ಲಿ ಅನೇಕ ಬಾರಿ ಧ್ವನಿ ಎತ್ತಿದ್ದರು ರಾಮ್‍ರವರು.

ಹಿಂದೆ ದೇಶದಲ್ಲಿ ಭೂಮಿ, ನೀರು ಮತ್ತು ಜನಸಂಖ್ಯೆ ಸಂಪದ್ಭರಿತವಾಗಿದ್ದರೂ ಆಹಾರ ಧಾನ್ಯಗಳನ್ನು ವಿದೇಶದಿಂದ ರಫ್ತು ಮಾಡುತ್ತಿದ್ದ ಸಮಯದಲ್ಲಿ ನಾವೇ ಸ್ವಾವಲಂಬಿಗಳಾಗಬೇಕೆಂದು ಪಣ ತೊಟ್ಟು ಹಸಿರು ಕ್ರಾಂತಿಗೆ ನಾಂದಿ ಹಾಡಿದವರು ಅವರು.
ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‍ರವರು ದಲಿತರು, ಹಿಂದುಳಿದವರನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆ ತರುವ ಉದ್ದೇಶದಿಂದ ಕನಿಷ್ಟ 10 ವರ್ಷದವರೆಗೆ ಮೀಸಲಾತಿ ತಂದರು.

ಈಗ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಶೇ.0.5 ರಷ್ಟು ಈ ವರ್ಗದವರು ಮೇಲೆ ಬಂದಿಲ್ಲ. ಪ್ರತಿ ಇಲಾಖೆಯಲ್ಲಿ ಇವರಿಗೆ ಮೀಸಲಾತಿ ಇದೆ. ಅರ್ಹರಿಗೆ ಈ ಸೌಲಭ್ಯಗಳು ದೊರೆಯುತ್ತಿವೆಯೇ ಎಂಬ ಪ್ರಶ್ನೆ ಹಾಕಿಕೊಳ್ಳಬೇಕಿದೆ. ಸರ್ಕಾರ ಈ ವರ್ಗಗಳಿಗೆ ನೀಡುವ ಯಾವ ಸೌಲಭ್ಯಗಳು ಮತ್ತು ಮೀಸಲಾತಿ ದುರುಪಯೋಗವಾಗದಂತೆ ನೋಡಿಕೊಳ್ಳಬೇಕಿದೆ.

ದಲಿತರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು. ಓದಿಸುವ ಹಂಬಲ ಪೋಷಕರಿಗೆ ಮತ್ತು ಓದುವ ಹಂಬಲ ಮಕ್ಕಳಲ್ಲಿ ಹೆಚ್ಚಾಗಬೇಕು. ಸರ್ಕಾರದ ಸವಲತ್ತುಗಳೊಂದಿಗೆ ಸಂಘಟನಾತ್ಮಕ ಹೋರಾಟದ ಅವಶ್ಯಕತೆಯೂ ಇದೆ. ಇಂದು ಯಾವ ಕಾರಣಕ್ಕೋ ಹೋರಾಟದ ಕಿಚ್ಚು ಕಡಿಮೆ ಆಗುತ್ತಿದೆ.

ಸ್ವಾತಂತ್ರ್ಯಾನಂತರ ಬ್ಯಾಕ್‍ಲಾಗ್ ಹುದ್ದೆಗಳು ಭರ್ತಿ ಆಗಿಲ್ಲ. ಕಾರಣ ಈ ವರ್ಗದಲ್ಲಿ ಶಿಕ್ಷಣದ ಕೊರತೆಯೂ ಒಂದು. ಅಟಲ್ ಬಿಹಾರಿ ವಾಜಪೇಯಿಯವರು ತಮ್ಮ ಅವಧಿಯಲ್ಲಿ ಎಲ್ಲ ಪಕ್ಷಗಳೊಡಗೂಡಿ ಬ್ಯಾಕ್‍ಲಾಗ್ ಹುದ್ದೆ ಭರ್ತಿಗೆ ಕ್ರಮ ಕೈಗೊಂಡಿದ್ದರು.

ಈ ವರ್ಗದ ಜನ ಕೂಡ ತಮ್ಮ ಹಕ್ಕು ಮತ್ತು ಸವಲತ್ತುಗಳನ್ನು ಉಪಯೋಗಿಸಲು ಮುಂದೆ ಬರಬೇಕು. ಸಮಾಜದಲ್ಲಿ ದಲಿತ, ಹಿಂದುಳಿದವರು ಜಾಗೃತಿ ಹೊಂದಬೇಕು. ಹೊಂದುತ್ತಿದ್ದಾರೆ. ಅದಕ್ಕೆ ಉತ್ತಮ ಉದಾಹರಣೆ ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ. ತಮ್ಮ ಸಂಪುಟದ 77 ಮಂತ್ರಿಗಳ ಪೈಕಿ 27 ಜನರು ಹಿಂದುಳಿದ ಮತ್ತು 20 ಜನ ದಲಿತರನ್ನು ಮಂತ್ರಿ ಮಾಡಿರುವುದು ಎಂದರು.

ಮೊದಲು ನಾನು ಬದಲಾಗಬೇಕು. ನನ್ನ ಕುಟುಂಬ ಉದ್ದಾರವಾಗಬೇಕು ಎಂದು ಎಲ್ಲರೂ ಮುಂದೆ ಬರಬೇಕು. ಹೀಗೆ ಸಮ ಸಮಾಜ ನಿರ್ಮಾಣವಾದಾಗ ಇಂತಹ ಮಹಾನ್ ವ್ಯಕ್ತಿಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸೋಣ, ಅಭಿವೃದ್ದಿ ಹೊಂದೋಣ ಎಂದರು.

ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಮಾತನಾಡಿ, ನಮ್ಮ ಅಕ್ಕಪಕ್ಕದ ರಾಷ್ಟ್ರಗಳು ದಿವಾಳಿಯಾಗುತ್ತಿರುವುದನ್ನು ನೋಡಿದರೆ ಅವುಗಳ ಬುನಾದಿ ಸರಿ ಇಲ್ಲ ಎಂದು ಮನವರಿಕೆ ಆಗುತ್ತದೆ. ಸುಮಾರು 53 ರಾಷ್ಟ್ರಗಳಿಂದ ಪಡೆಯಲಾದ ನಮ್ಮ ಸಂವಿಧಾನ ಅದ್ಭುತವಾಗಿದೆ. ನಾವು ಜೀವನ ಮಾಡುವ ಸ್ಥಿತಿಯನ್ನು ನಿರ್ಮಿಸಿಕೊಟ್ಟಿದೆ. ಬಾಬು ಜಗಜೀವನರಾಮ್‍ರವರು ಹಸಿರು ಕ್ರಾಂತಿ ಮತ್ತು ಕಾರ್ಮಿಕರ ಏಳ್ಗೆಗಾಗಿ ಹೋರಾಡಿದರು. ಹಲವಾರು ಜನಾಂಗಗಳಿಗೆ ಶಕ್ತಿ ತುಂಬಿದರು.

ಇತ್ತೀಚಿ ವರ್ಷಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪಾರದರ್ಶಕತೆಯನ್ನು ಕಾಣುತ್ತಿದ್ದೇವೆ. ಇದು ಒಳ್ಳೆಯ ಬೆಳವಣಿಗೆ ಎಂದ ಅವರು ಸಮಾಜದಲ್ಲಿ ಇನ್ನೂ ಅನೇಕ ಸಮಸ್ಯೆಗಳು ಇವೆ. ಅವನ್ನು ಪರಿಹರಿಸುವ ಕೆಲಸ ಎಲ್ಲ ಸೇರಿ ಮಾಡಬೇಕೆಂದರು.

ಇತಿಹಾಸ ಪ್ರಾಧ್ಯಾಪಕರಾದ ಡಾ.ಕೆ.ಜಿ.ವೆಂಕಟೇಶ್ ವಿಶೇಷ ಉಪನ್ಯಾಸ ನೀಡಿ,ಡಾ.ಬಾಬು ಜಗಜೀವನರಾಮ್‍ರವರ ಜೀವನದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾನಗರಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಸದಸ್ಯರಾದ ಸುರೇಖಾ ಮುರಳಿಧರ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಎಡಿಸಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮಲ್ಲಿಕಾರ್ಜುನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮಾಜದ ಮುಖಂಡರು ಹಾಜರಿದ್ದರು.

Sneha Gowda

Recent Posts

ಲಕ್ನೋ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಆತಿಥೇಯ ಸನ್‌ರೈಸರ್ಸ್ ಹೈದರಾಬಾದ್‌ ತಂಡ…

28 mins ago

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

44 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

55 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

9 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

9 hours ago