News Karnataka Kannada
Tuesday, April 30 2024
ಶಿವಮೊಗ್ಗ

ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

Araga Jnanendra.
Photo Credit :

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ನಾನು ಗೃಹಸಚಿವನಾಗಿದ್ದೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ದಿನದಂದೇ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪೌರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಂಸದ ಬಿ.ವೈ ರಾಘವೇಂದ್ರರನ್ನು ಗೃಹ ಸಚಿವರು ಹಾಡಿ ಹೊಗಳಿದ್ದಾರೆ.

ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಪುರಸಭೆ ವತಿಯಿಂದ ನೀಡಲಾದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಗೃಹ ಸಚಿವರು, ಯಡಿಯೂರಪ್ಪ ಕುಟುಂಬದೊಂದಿಗೆ ಹಿಂದಿನಿಂದಲೂ ನನಗೆ ಅವಿನಾಭಾವ ಸಂಬಂಧವಿದೆ. 1983ರಲ್ಲಿ ಯಡಿಯೂರಪ್ಪ ಶಿಕಾರಿಪುರದಿಂದ, ನಾನು ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಅಂದಿನ ಚುನಾವಣೆಯಲ್ಲಿ ನಾನು ರಿವರ್ಸ್ ಗೇರ್ ಇಲ್ಲದ ಕಾರಿನಲ್ಲಿ ಪ್ರಚಾರ ಮಾಡಿ ಎರಡು ಸಾವಿರ ಮತಗಳಿಂದ ಸೋತಿದ್ದೆ. ಅಂದು ಸ್ವಲ್ಪ ಪ್ರಯತ್ನಿಸಿದ್ದರೆ, ಯಡಿಯೂರಪ್ಪ ಅವರೊಂದಿಗೆ ನಾನು ಶಾಸಕನಾಗುತ್ತಿದ್ದೆ. 9 ಸಾರಿ ಚುನಾವಣೆಗೆ ಸ್ಪರ್ಧಿಸಿ, ನಾಲ್ಕು ಬಾರಿ ಗೆದ್ದಿದ್ದೇನೆ ಎಂದರು.

 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು