ಶಿವಮೊಗ್ಗ

ಯಡಿಯೂರಪ್ಪನವರ ಆಶೀರ್ವಾದದಿಂದ ಗೃಹಸಚಿವನಾಗಿದ್ದೇನೆ: ಅರಗ ಜ್ಞಾನೇಂದ್ರ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಆಶೀರ್ವಾದಿಂದ ನಾನು ಗೃಹಸಚಿವನಾಗಿದ್ದೇನೆ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.ಸಂಸದ ಬಿ.ವೈ ರಾಘವೇಂದ್ರ ಅವರ ಹುಟ್ಟುಹಬ್ಬದ ದಿನದಂದೇ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಪೌರ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಂಸದ ಬಿ.ವೈ ರಾಘವೇಂದ್ರರನ್ನು ಗೃಹ ಸಚಿವರು ಹಾಡಿ ಹೊಗಳಿದ್ದಾರೆ.

ಜಿಲ್ಲೆಯ ಶಿಕಾರಿಪುರದಲ್ಲಿ ಇಂದು ಪುರಸಭೆ ವತಿಯಿಂದ ನೀಡಲಾದ ಪೌರ ಸನ್ಮಾನ ಸ್ವೀಕರಿಸಿ ಮಾತನಾಡಿದ ಗೃಹ ಸಚಿವರು, ಯಡಿಯೂರಪ್ಪ ಕುಟುಂಬದೊಂದಿಗೆ ಹಿಂದಿನಿಂದಲೂ ನನಗೆ ಅವಿನಾಭಾವ ಸಂಬಂಧವಿದೆ. 1983ರಲ್ಲಿ ಯಡಿಯೂರಪ್ಪ ಶಿಕಾರಿಪುರದಿಂದ, ನಾನು ತೀರ್ಥಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ಅಂದಿನ ಚುನಾವಣೆಯಲ್ಲಿ ನಾನು ರಿವರ್ಸ್ ಗೇರ್ ಇಲ್ಲದ ಕಾರಿನಲ್ಲಿ ಪ್ರಚಾರ ಮಾಡಿ ಎರಡು ಸಾವಿರ ಮತಗಳಿಂದ ಸೋತಿದ್ದೆ. ಅಂದು ಸ್ವಲ್ಪ ಪ್ರಯತ್ನಿಸಿದ್ದರೆ, ಯಡಿಯೂರಪ್ಪ ಅವರೊಂದಿಗೆ ನಾನು ಶಾಸಕನಾಗುತ್ತಿದ್ದೆ. 9 ಸಾರಿ ಚುನಾವಣೆಗೆ ಸ್ಪರ್ಧಿಸಿ, ನಾಲ್ಕು ಬಾರಿ ಗೆದ್ದಿದ್ದೇನೆ ಎಂದರು.

 

 

 

Indresh KC

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago