ಶಿವಮೊಗ್ಗ : ಯಡಿಯೂರಪ್ಪ ನನ್ನ ರಾಜಕೀಯವಾಗಿ ಬೆಳೆಸಿದ್ದಾರೆ. ಅವರಿಲ್ಲದೇ ಇದ್ದರೇ ನಾನು ಸಿಎಂ ಆಗೋದಕ್ಕೆ ಸಾಧ್ಯವಾಗುತ್ತಿರಲಿಲ್ಲ. ನನ್ನನ್ನು ಮುಖ್ಯಮಂತ್ರಿ ಮಾಡಿದ್ದೇ ಬಿಎಸ್ ಯಡಿಯೂರಪ್ಪ ಎಂಬುದಾಗಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು, ಹಾಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಹಾಡಿ ಹೊಗಳಿಸಿದ್ದಾರೆ.
ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಪುರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ನನಗೆ ಯಡಿಯೂರಪ್ಪ ಸಿಕ್ಕಿದ್ದೇ ಪೂರ್ವ ಜನ್ಮದ ಪುಣ್ಯವಾಗಿದೆ. ನಾನು ರಾಜಕೀಯವಾಗಿ ಬೆಳೆಯಲು, ಮುಖ್ಯಮಂತ್ರಿಯಾಗೋದಕ್ಕೆ ಅವರೇ ಕಾರಣವಾಗಿದ್ದಾರೆ. ಈ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯೋದಾಗಿ ತಿಳಿಸಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ಮುತ್ಸದ್ಧಿ ರಾಜಕಾರಣಿ. ದೂರದೃಷ್ಠಿಯುಳ್ಳಂತ ನಾಯಕರಾಗಿದ್ದಾರೆ. ಈ ರಾಜ್ಯದ ಜನತೆಯ ಬಗ್ಗೆ ಅಪಾರ ಕಾಳಜಿ ಕೂಡ ಹೊಂದಿದ್ದಾರೆ. ಅವರ ಮಾರ್ಗದರ್ಶನ, ಆಡಳಿತ ವೈಖರಿ ಎಲ್ಲರಿಗೂ ಮಾದರಿಯಾದಂತದ್ದು ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಬಿಎಸ್ ವೈ ಅವರನ್ನು ಸಿಎಂ ಬೊಮ್ಮಾಯಿ ಹಾಡಿ ಹೊಗಳಿದ್ದಾರೆ.