News Karnataka Kannada
Sunday, May 05 2024
ಶಿವಮೊಗ್ಗ

ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದೆ; ಮಧು ಬಂಗಾರಪ್ಪ

Madhu Bangarappa 30072021
Photo Credit :

ಶಿವಮೊಗ್ಗ: ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಬದಲಾವಣೆಯ ವಾತವರಣ ಕಂಡುಬರುತ್ತಿದೆ. ಜನರಿಗೆ ಸುಳ್ಳು ಹೇಳಿ, ಬಿಜೆಪಿಯವರು ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಅದರ ಪರಿಣಾಮವಾಗಿ ಹಾನಗಲ್ ಉಪ ಚುನಾವಣೆ ಫಲಿತಾಂಶ ಬಂದಿದೆ.

ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಕಡೆ ಓಡಾಟ ಮಾಡುತ್ತಿದ್ದೇನೆ. ಆರ್.ಪ್ರಸನ್ನ ಕುಮಾರ್ ಮತ್ತು‌ ಭೀಮಣ್ಣ ನಾಯ್ಕ್ ಪರವಾಗಿ ಉತ್ತಮ ವಾತವರಣವಿದೆ. ಕಳೆದ ಆರು ವರ್ಷ ಅವಧಿಯಲ್ಲಿ ಪ್ರಸನ್ನ ಕುಮಾರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯತ್ ಸದಸ್ಯರು ನಾವು ಯಾಕದರೂ ಸದಸ್ಯರಾಗಿದ್ದೇವೆ ಎಂದು ಬೇಸತ್ತು ಹೋಗಿದ್ದಾರೆ. ಅನುದಾನ ಇಲ್ಲ, ಯಾವುದೇ ಕೆಲಸ ಇಲ್ಲ. ಜನರಿಂದ ಬಳಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಟ್ಟ ಮನೆಗಳಿಗೆ ಇಂದು ಸರ್ಕಾರ ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಫಲಾನುಭವಿಗಳು ಇವತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಕೇಳುತ್ತಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಸರ್ಕಾರ ಕ್ರೀಯಾಯೋಜನೆ ರೂಪಿಸುವ ಕೆಲಸ ಮಾಡುತ್ತಿದೆ. ಹಾಗಾದರೆ ಗ್ರಾಮ ಪಂಚಾಯತ್ ಸದಸ್ಯರು ಗೆದ್ದು ಬಂದಿರುವುದು ಯಾವ ಕಾರಣಕ್ಕೆ.? ಬಿಜೆಪಿ ಬೆಂಬಲಿತ ಸದಸ್ಯರುಗಳೇ ಇಂದು ಬೇಸತ್ತು ಕಾಂಗ್ರೆಸ್ ಪರವಾಗಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿನ ಜೆಡಿಎಸ್ ಬೆಂಬಲಿತ ಸದಸ್ಯರುಗಳು ನಮ್ಮ ಪರವಾಗಿಯೇ ಇದ್ದಾರೆ. ಆರ್.ಪ್ರಸನ್ನಕುಮಾರ್ ಉತ್ತಮ ಅಂತರದಲ್ಲೇ ಈ ಬಾರಿ ಗೆಲ್ಲಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳ ಪರವಾಗಿ ಪರಿಷತ್ ನಲ್ಲಿ ಪ್ರಸನ್ನ ಕುಮಾರ್ ಧ್ವನಿಯಾಗಲಿದ್ದಾರೆ ಎಂದ ಮಧು ಬಂಗಾರಪ್ಪ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು