ಶಿವಮೊಗ್ಗ : ಶಾಲೆಗಳಲ್ಲಿ ವಿದ್ಯಾರ್ಥಿನಿಗಳಿಗೆ ಹಿಜಾಬ್ ಧರಿಸುವ ಅವಕಾಶ ನೀಡಬೇಕು ಹಾಗೂ ಶಾಲೆಗಳ ಆವರಣಗಳಲ್ಲಿ ಪ್ರವೇಶಿಸಲು ಮಾಧ್ಯಮ ವರದಿಗಾರರಿಗೆ ನಿಷೇಧಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್ ಡಿಪಿಐ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿ ವತಿಯಿಂದ ಮಾನ್ಯ ಡಿಡಿಪಿಐ ರವರಿಗೆ ಮನವಿ ಸಲ್ಲಿಸಿದ್ದಾರೆ.
ನ್ಯಾಯಾಲಯದ ಮಧ್ಯಾಂತರ ಆದೇಶ ಹೊರಡಿಸಿರುವುದು ಕಾಲೇಜುಗಳಿಗೆ ಮಾತ್ರ ಅನ್ವಯಿಸುತ್ತದೆ ಆದರೇ ಇದನ್ನು ದುರುಪಯೋಗ ಪಡಿಸಿಕೊಂಡು ಶಾಲೆಯ ಮಕ್ಕಳಿಗೆ ಅನ್ವಯಿಸಲು ಮುಂದಾಗಿರುವುದನ್ನು ಕೂಡಲೇ ನಿಲ್ಲಿಸಿ ಶಾಲೆಯ ವಿದ್ಯಾರ್ಥಿನಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಶಾಲೆಯ ಪುಟ್ಟ ಮಕ್ಕಳನ್ನು ಮಾಧ್ಯಮ ವರದಿಗಾರರು ಅಪರಾಧಿಗಳಂತೆ ವರ್ತಿಸಿ ಪ್ರಸಾರ ಮಾಡುತ್ತಿರುವುದು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ, ಶಾಲೆ ಆವರಣದಲ್ಲಿ ಮಾಧ್ಯಮ ವರದಿಗಾರರಿಗೆ ಶಾಲೆಯ ಮಕ್ಕಳಿಗೆ ಹಿಂಸೆ ನೀಡಿದಂತೆ ತಡೆದು ಶಾಲೆಯ ಮಕ್ಕಳಿಗೆ ರಕ್ಷಣೆ ಬೇಕಾದ ಕ್ರಮ ಕೈಗೊಳ್ಳಬೇಕು.
ನ್ಯಾಯಾಲಯದ ಮಧ್ಯಾಂತರ ಆದೇಶ ಶಿಕ್ಷಕಿಯರಿಗೆ ಅನ್ವಯವಾಗುವುದಿಲ್ಲ ಹಾಗಾಗಿ ಶಿಕ್ಷಣ ಇಲಾಖೆ ಶಿಕ್ಷಕಿಯರಿಗೆ ಹಿಜಾಬ್ ತೆಗೆಯಲು ಬಲವಂತ ಪಡಿಸಬಾರದು ಎಂದು ಎಸ್ ಡಿಪಿಐ ಆಗ್ರಹಿಸುತ್ತದೆ.
ಶಾಲೆಯ ಮಕ್ಕಳಿಗೆ ರಕ್ಷಣೆ ನೀಡುವ ವಿಷಯದಲ್ಲಿ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಶಿವಮೊಗ್ಗ ಜಿಲ್ಲಾ ಸಮಿತಿ ಆಗ್ರಹಿಸಿದೆ.