News Karnataka Kannada
Friday, May 03 2024
ಶಿವಮೊಗ್ಗ

ಶಿವಮೊಗ್ಗದಲ್ಲಿ ಕಾಮತ್ ಪೆಟ್ರೋಲ್​ ಬಂಕ್​ ಬಳಿ ಯುವಕನ ಹತ್ಯೆ

Shimogga Murder
Photo Credit : News Kannada

ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಗರದ ಕಾಮತ್​ ಪೆಟ್ರೋಲ್​ ಬಂಕ್​ ಬಳಿಯ ಸಪ್ತಗಿರಿ ಬಾರ್ ಬಳಿಯಲ್ಲಿ ಹರ್ಷ ಎಂಬಾತನ ಕೊಲೆಯಾಗಿದೆ.

ಸುಮಾರು ಒಂಬತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಶಿವಮೊಗ್ಗ ನಗರಾದ್ಯಂತ ದಿನಾಂಕ 21 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಮೊನ್ನೆ ರಾತ್ರಿ ಸೂಳೇ ಬೈಲಿನಲ್ಲಿ ನಡೆದ ಜಗಳದಲ್ಲಿ ಇಬ್ಬರ ಹತ್ಯೆಯಾಗಿತ್ತು ಮತ್ತು ನಿನ್ನೆ ರಾತ್ರಿ ನಡೆದ ಹತ್ಯೆ ಹಿನ್ನೆಲೆ ಮುಂಜಾಗ್ರತೆಯಾಗಿ ಜಿಲ್ಲಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.

ಹತ್ಯೆಯ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸೋಮವಾರ ಮುಂಜಾನೆ  ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಕೊಲೆ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು