ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಗರದ ಕಾಮತ್ ಪೆಟ್ರೋಲ್ ಬಂಕ್ ಬಳಿಯ ಸಪ್ತಗಿರಿ ಬಾರ್ ಬಳಿಯಲ್ಲಿ ಹರ್ಷ ಎಂಬಾತನ ಕೊಲೆಯಾಗಿದೆ.
ಸುಮಾರು ಒಂಬತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಶಿವಮೊಗ್ಗ ನಗರಾದ್ಯಂತ ದಿನಾಂಕ 21 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಮೊನ್ನೆ ರಾತ್ರಿ ಸೂಳೇ ಬೈಲಿನಲ್ಲಿ ನಡೆದ ಜಗಳದಲ್ಲಿ ಇಬ್ಬರ ಹತ್ಯೆಯಾಗಿತ್ತು ಮತ್ತು ನಿನ್ನೆ ರಾತ್ರಿ ನಡೆದ ಹತ್ಯೆ ಹಿನ್ನೆಲೆ ಮುಂಜಾಗ್ರತೆಯಾಗಿ ಜಿಲ್ಲಾಧಿಕಾರಿ ಈ ಕ್ರಮವನ್ನು ಕೈಗೊಂಡಿದ್ದಾರೆ.
ಹತ್ಯೆಯ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸೋಮವಾರ ಮುಂಜಾನೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಕೊಲೆ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ.