News Karnataka Kannada
Friday, May 17 2024
ಶಿವಮೊಗ್ಗ

ಶಿವಮೊಗ್ಗದಲ್ಲಿ ಬಂದ್ ಗೆ ಬೆಂಬಲ: ಮುಸ್ಲಿಂ ಅಂಗಡಿ-ಮುಂಗಟ್ಟುಗಳು ಬಹುತೇಕ ಬಂದ್

Photo Credit : News Kannada

ಶಿವಮೊಗ್ಗ: ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು.

ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು.

ಅಮೀರ್ ಅಹ್ಮದ್ ವೃತ್ತ ಓಟಿ ರಸ್ತೆ ಕೆ.ಆರ್ ಪುರಂ, ಗಾಂಧಿ ಬಜಾರ್ ನ ಮುಂಭಾಗದ ಚಪ್ಪಲಿ ಅಂಗಡಿಗಳು ಹಣ್ಣಿನ ಅಂಗಡಿಗಳು, ತರಕಾರಿ ಅಂಗಡಿಗಳು ಇಂದು ರಸ್ತೆಗೆ ಇಳಿದಿರಲಿಲ್ಲ. ಎನ್.ಟಿ ರಸ್ತೆಯಲ್ಲಿನ ಅಂಗಡಿಗಳು ಬಂದ್ ಆಗಿವೆ. ಆದರೆ ಕೆಲ ಬಡ ಬೀದಿ ವ್ಯಾಪಾರಸ್ಥರನ್ನು ಹೊರತುಪಡಿಸಿ ಬಂದ್ ಯಶಸ್ವಿಯಾಗಿದೆ.

ಚಳುವಳಿ ರೂಪದಲ್ಲಿ ಮುಸ್ಲಿಂ ಒಕ್ಕೂಟವು ಬಂದ್ ಆಚರಿಸುವ ನಿರ್ಧಾರ ಕೈಬಿಟ್ಟಿದ್ದರಿಂದ ಅಲ್ಲದೆ ನಗರದಲ್ಲಿ 144 ಸೆಕ್ಷನ್ ಇರುವ ಕಾರಣ ಬೀದಿಗಿಳಿದು ಪ್ರತಿಭಟನೆ ನಡೆಸಲಿಲ್ಲ. ಬಂದ್ ವೇಳೆ ಅಂಗಡಿ ಮುಂಗಟ್ಟುಗಳನ್ನ ಒತ್ತಾಯ ಪೂರ್ವಕವಾಗಿ ಮುಚ್ಚಿಸುವ ಪ್ರಯತ್ನಗಳು ಎಲ್ಲೂ ನಡೆದಿರುವುದು ಕಂಡು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು