ಶಿವಮೊಗ್ಗ : ಜಿಲ್ಲೆ ಗೆ ಓಂ ಶಕ್ತಿ ಯಾತ್ರೆ ಇಂದ ಮರಳಿದ ಜನರಲ್ಲಿ ಗುರುವಾರ ಒಬ್ಬರಲ್ಲಿ ಶುಕ್ರವಾರ 6 ಜನ ಭಕ್ತರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಶಿವಮೊಗ್ಗದಿಂದ 82 ಬಸ್ಗಳಲ್ಲಿ 4,300ಕ್ಕೂ ಹೆಚ್ಚು ಮಹಿಳೆಯರು ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ ದೇವಾಲಯ ತೆರಳಿದ್ದರು. ಯಾತ್ರೆ ಮುಗಿಸಿ ಬಂದ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು.
ಜೊತೆಗೆ ಎಲ್ಲರನ್ನೂ ಹೋಮ್ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಇಂದು ಅವರ ವರದಿ ಬಂದಿದ್ದು, 6 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಸೋಂಕು ದೃಢಪಟ್ಟವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓಂ ಶಕ್ತಿ ಯಾತ್ರೆಗೆ ಹೋಗಿ ಬಂದವರಲ್ಲಿ ಕೋವಿಡ್ ಸೋಂಕು ಧೃಢವಾದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಭೀತಿ ಹೆಚ್ಚಾಗಿದೆ.