ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ,. ಸೋಂಕು ಇನ್ನಷ್ಟು ಹೆಚ್ಚಬಾರದು ಎಂಬ ದೃಷ್ಟಿಯಿಂದ 1ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ನೀಡಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ರಜೆ ನೀಡಲು ನಿರ್ಧಾರ ಮಾಡಲಾಗಿದೆ.
ಸಭೆಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಶಾಲಾ ಮಕ್ಕಳು ಹಾಗೂ ಶಿಕ್ಷಕರಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆನಾಳೆಯಿಂದ ಸೋಮವಾರದವರೆಗೆ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲಾಗಿದೆ. ಈವರೆಗೆ 45 ಶಾಲೆಯ 208 ಮಕ್ಕಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ ಎಂದರು.
ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಟಾಸ್ಕ್ ಪೋರ್ಸ್ ರಚಿಸಲಾಗಿದೆ. ಭಾನುವಾರ ಮತ್ತೆ ಸಭೆ ಸೇರಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ನಗರದ ಮಂಗಲಪೇಟ್ ಸಮೀಪದ ಮೆಥೋಡಿಸ್ಟ್ ಚರ್ಚ್ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.
ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್ ಫಾರ್ ಫ್ರಾಡ್…
ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…
ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…
ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ 4…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…