ಶಿವಮೊಗ್ಗ: ಮಹಾಶಿವರಾತ್ರಿಗೆ ಶಿವಮೊಗ್ಗ ಹಾಲು ಒಕ್ಕೂಟ ರೈತರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಲೀಟರ್ ಹಾಲಿಗೆ 2.50 ರೂ. ಹೆಚ್ಚಳ ಮಾಡಲಾಗಿದೆ.
ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದ ರಾವ್ ನಿಸರಾಣಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಳೆದ ವರ್ಷ ಕೊರೋನ ಹಿನ್ನೆಲೆಯಲ್ಲಿ ಹಾಲು ಒಕ್ಕೂಟಕ್ಕೆ ನಷ್ಟವಾಗಿತ್ತು. ಹಾಗಾಗಿ ಹಾಲಿನ ದರವನ್ನು 1.75 ಪೈಸೆ ಕಡಿತಗೊಳಿಸಲಾಗಿತ್ತು. ಇದೀಗ ಹಾಲು ಒಕ್ಕೂಟ ಲಾಭದ ಕಡೆಗೆ ಬಂದಿದೆ. ಲಾಭಾಂಶವನ್ನು ರೈತರಿಗೆ ನೀಡುತ್ತಿದ್ದೇವೆ. ನಿರಂತರವಾಗಿ ಈ ದರವನ್ನು ನೀಡುವ ಅಪೇಕ್ಷೆ ಹೊಂದಿದ್ದೇವೆ ಎಂದರು.
ಹಾಲಿನ ದರ ಏರಿಕೆಯಿಂದ ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಹಾಲು ಒಕ್ಕೂಟದ ವ್ಯಾಪ್ತಿಯ 1.65 ಲಕ್ಷ ರೈತರಿಗೆ ಇದರಿಂದ ಲಾಭವಾಗಲಿದೆ. ಶಿವಮೊಗ್ಗ ಹಾಲು ಒಕ್ಕೂಟದಲ್ಲಿ ಪ್ರತಿನಿತ್ಯ 5.20 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇದರಲ್ಲಿ 3 ಲಕ್ಷ ಲೀಟರ್ ಹಾಲು ಮತ್ತು ಹಾಲಿನ ಉತ್ಪನ್ನಗಳು ಮಾರಾಟವಾಗುತ್ತಿದೆ. ಉಳಿದ 70 ಸಾವಿರ ಲೀಟರ್ ಹಾಲನ್ನು ಹಾಲಿನ ಪುಡಿ ಮತ್ತು ಬೆಣ್ಣೆಗೆ ಬಳಸಲಾಗುತ್ತಿದೆ. ಜನವರಿಯಲ್ಲಿ ಹಾಲು ಒಕ್ಕೂಟ 5.5 ಕೋಟಿ ಲಾಭ ಗಳಿಸಿದೆ. ಬರುವ ಮಾರ್ಚ್ ವೇಳೆಗೆ 6 ಕೋಟಿ ರೂ. ನಿವ್ವಳ ಲಾಭ ಗಳಿಸುವ ನಿರೀಕ್ಷೆ ಇದೆ. ಲಾಭಾಂಶವನ್ನು ರೈತರಿಗೆ ನೀಡುತ್ತಿದ್ದೇವೆ ಎಂದರು.
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…
ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…
ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…
ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…