ಶಿವಮೊಗ್ಗ: ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಆರ್. ಪ್ರಸನ್ನಕುಮಾರ್ ಇಂದು ಚುನಾವಣಾಧಿಕಾರಿಗೆ ಬಿ ಫಾರಂನೊಂದಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಶಾಸಕ ಬಿ.ಕೆ. ಸಂಗಮೇಶ್ವರ್, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕರಾದ ಶಾಂತನಗೌಡ ಇದ್ದರು.
ಆರ್. ಪ್ರಸನ್ನಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಎಸ್ ಪಿ ದಿನೇಶ್, ಯು.ಶಿವಾನಂದ , ಹೆಚ್.ಸಿ. ಯೋಗೀಶ್, ರಮೇಶ್ ಹೆಗ್ಡೆ, ಕಲಗೋಡು ರತ್ನಾಕರ್, ಎಸ್ಸಿ ಘಟಕದ ಅಧ್ಯಕ್ಷರಾದ ಪಲ್ಲವಿ.
ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಮೇಶ್ ಇಕ್ಕೇರಿ. ಶಂಕರಘಟ್ಟ ರಮೇಶ್, ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸೌಗಂಧಿಕ ರಘುನಾಥ್ ಇದ್ದರು.