ಶಿವಮೊಗ್ಗ :ವಿವಿಧ ಕಾಮಗಾರಿಗಳ ಹಿನ್ನಲೆಯಲ್ಲಿ ನಾಳೆ ಮತ್ತು ಅಕ್ಟೋಬರ್ 25, 26ರಂದು ವಿದ್ಯುತ್ ವ್ಯತ್ಯಯ

 ಶಿವಮೊಗ್ಗ : ವಿವಿಧ ಕಾಮಗಾರಿಗಳ ಹಿನ್ನಲೆಯಲ್ಲಿ ನಾಳೆ ಮತ್ತು ಅಕ್ಟೋಬರ್ 25, 26ರಂದು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ   ಉಂಟಾಗಲಿದೆ. ಇದರಿಂದಾಗಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿದ್ಯುತ್ ಉಪಕೇಂದ್ರದ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ವೆಂಕಟೇಶನಗರ, ಅಚ್ಯುತ್‍ರಾವ್ ಲೇಔಟ್, ಚೆನ್ನಪ್ಪ ಲೇಔಟ್, ಜಯನಗರ, ಎ.ಎನ್.ಕೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 23/10/2021 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಇನ್ನೂ ಅಕ್ಟೋಬರ್ 23ರಂದೇ, ಮಂಡ್ಲಿ ವಿವಿ ಕೇಂದ್ರಕ್ಕೆ ಸಂಪರ್ಕ ಹೊಂದಿರುವ ದುರ್ಗಿಗುಡಿ 11 ಕೆವಿ ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿದ್ದು, ಗಾರ್ಡ್‍ನ್ ಏರಿಯಾ 1 ರಿಂದ 3 ಅಡ್ಡರಸ್ತೆಗಳು, ಸವಾರ್‍ಲೇನ್ ರಸ್ತೆ, ಎಲ್ ಎಲ್ ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 23/10/2021 ರಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.

ಅ.25 ಮತ್ತು 26 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ವೀರಭದ್ರೇಶ್ವರ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸ 11 ಕೆ.ವಿ. ಮಾರ್ಗದ ಕೆಲಸವಿರುವುದರಿಂದ ದಿ: 25/10/2021 ಮತ್ತು ದಿ: 26/10/2021 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Gayathri SG

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

1 min ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

25 mins ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

45 mins ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

1 hour ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

1 hour ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago