News Karnataka Kannada
Monday, April 29 2024
ಶಿವಮೊಗ್ಗ

ಶಿವಮೊಗ್ಗ: ಸಚಿವ ಈಶ್ವರಪ್ಪರನ್ನು ವಜಾ ಮಾಡಲು ಆಗ್ರಹಿಸಿ, ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ

Strik
Photo Credit : News Kannada

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಹಾಗೂ ಸದನದಲ್ಲಿ ಅಸಂವಿಧಾನಿಕ ತೋರಿದ ಸಚಿವ ಈಶ್ವರಪ್ಪರನ್ನು ವಜಾ ಮಾಡಲು ಆಗ್ರಹಿಸಿ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ.  40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ.

ಸಚಿವ ಕೆಎಸ್ ಈಶ್ವರಪ್ಪನವರು ಸಂವಿಧಾನಾತ್ಮಕವಾದ ಸ್ಥಾನದಲ್ಲಿದ್ದು ರಾಷ್ಟ್ರಧ್ವಜಕ್ಕೆ ಅವಮಾನಿಸಿರುವುದು ಹಾಗೂ ರಾಜ್ಯದ ದೇಗುಲ ವಿಧಾನಸೌಧದಲ್ಲಿ ಸಚಿವ ಕೆಎಸ್ ಈಶ್ವರಪ್ಪನವರು ನಿನ್ನೆ ದಿವಸ ಅಸಂವಿಧಾನಿಕವಾಗಿ ಏಕವಚನ ಹಾಗೂ ಏರುಧ್ವನಿಯಲ್ಲಿ ಮಾತನಾಡಿರುವುದು ಅವರ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ ಸಂವಿಧಾನದ ಆಶಯದಂತೆ ಪ್ರಮಾಣವಚನ ಸ್ವೀಕರಿಸಿರುವ ಸಚಿವ ಈಶ್ವರಪ್ಪ ನವರು ದೇಶದ ಭಾವೈಕ್ಯತೆಗೆ ಧಕ್ಕೆ ಉಂಟುಮಾಡುವ ಪ್ರಚೋದನ ಕಾರಿ ಹೇಳಿಕೆಗಳನ್ನು ನೀಡುತ್ತಾ ದೇಶದ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದು ಬಿಜೆಪಿಯ ಸಂವಿಧಾನ ವಿರೋಧಿ ಸಂಸ್ಕೃತಿ ಎದ್ದು ತೋರುತ್ತದೆ.

ಕರ್ನಾಟಕದಲ್ಲಿ ವಾಮಮಾರ್ಗದಿಂದ ಅಧಿಕಾರ ಹಿಡಿದ ಬಿಜೆಪಿಯು ದಿನನಿತ್ಯ ಬಿಜೆಪಿಯ ಸಚಿವರು ಶಾಸಕರುಗಳು ಹಾಗೂ ನಾಯಕರುಗಳು ದೇಶದ ಕೋಮುಸೌಹಾರ್ದ ಭಾವೈಕ್ಯತೆಯನ್ನು ಇದಕ್ಕೆ ಮಾಡುವಂತಹ ಹೇಳಿಕೆ ನೀಡಿ ದೇಶದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು ಈ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ನಾವೆಲ್ಲರೂ ಒಂದೇ ಭಾರತೀಯರು ಎಂಬ ಮನೋಭಾವನೆಯನ್ನು ಜನರಲ್ಲಿ ಮೂಡಿಸುವುದರ ಬದಲಾಗಿ ಸಚಿವ ಕೆಎಸ್ ಈಶ್ವರಪ್ಪನವರೇ ಜನರಲ್ಲಿ ಜಾತಿ ಧರ್ಮದ ಬೀಜವನ್ನು ಬಿತ್ತುತ್ತಿದ್ದಾರೆ. ಕೂಡಲೇ ಮಾನ್ಯ ಘನವೆತ್ತ ರಾಜ್ಯಪಾಲರು ಇಂತಹ ದೇಶದ್ರೋಹಿ ಸಚಿವರನ್ನು ವಜಾ ಮಾಡಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
190
Ismail M Kutty

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು