News Karnataka Kannada
Sunday, April 28 2024
ಶಿವಮೊಗ್ಗ

ಶಿವಮೊಗ್ಗ : ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ

Bharath Bandh
Photo Credit :

ಶಿವಮೊಗ್ಗ: ಕೇಂದ್ರದ ಮೂರು ಕೃಷಿ ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಹಾಗೂ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿ ಶಿವಮೊಗ್ಗದಲ್ಲೂ ಬಂದ್ ಮಾಡಲಾಗುವುದು ಎಂದು ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ. ಎಪಿಎಂಸಿ ದುರ್ಬಲಗೊಳಿಸಲಾಗಿದೆ. ಕೃಷಿ ಭೂಮಿ ಗುತ್ತಿಗೆ ವ್ಯವಸ್ಥೆ ಸರಿಯಲ್ಲ. ಉದಾರೀಕರಣ, ಜಾಗತೀಕರಣದ ದುಷ್ಪರಿಣಾಮವನ್ನು ಇಂದಿಗೂ ರೈತರು ಅನುಭವಿಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಎರಡನೇ ಸ್ವಾತಂತ್ರ್ಯದ ಚಳುವಳಿ ನಡೆಯುತ್ತಿದೆ. ಅದನ್ನು ನಾವು ಯಶಸ್ವಿಗೊಳಿಸಬೇಕಿದೆ ಎಂದರು.

ರೈತ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ರೈತರ ಅಹಿಂಸಾತ್ಮಕ ಚಳವಳಿ ಐತಿಹಾಸಿಕವಾಗಿದೆ. 10 ತಿಂಗಳಿನಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಈ ಹೋರಾಟವನ್ನು ಪ್ರಾಯೋಜಿತ ಎಂದಿರುವುದು ವಿಪರ್ಯಾಸ ಎಂದು ಆಕ್ಷೇಪಿಸಿದರು.

ಈಗ ರಾಜ್ಯದಲ್ಲಿರುವುದು ಪ್ರಾಯೋಜಿತ ಸರ್ಕಾರ. ಚಳವಳಿಯನ್ನು ದೂರುವ ಬದಲು ಸರಿಯಾದ ಆಡಳಿತ ನೀಡಲಿ ಎಂದ ಅವರು ಅಗತ್ಯ ವಸ್ತು ಕಾಯಿದೆ ತಿದ್ದುಪಡಿ ಮೂಲಕ ಬಡವರ ಅನ್ನದ ತಟ್ಟೆಗೆ ಕೈ ಹಾಕಲಾಗಿದೆ. ಇದನ್ನು ಸಹಿಸುವುದಿಲ್ಲ ಎಂದರು.

ಶಿವಮೊಗ್ಗವನ್ನು ಬೆಳಗ್ಗೆ 6 ರಿಂದ ಸಂಜೆ 4ರವರೆಗೆ ಬಂದ್ ಮಾಡಲಾಗುವುದು. ಕಾರ್ಮಿಕರು, ಆಟೋ ರಿಕ್ಷಾ, ಟ್ಯಾಕ್ಸಿ, ವರ್ತಕರು, ಬೆಳ್ಳಿ, ಬಂಗಾರ ತಯಾರಕರು, ಹೋಟೆಲ್ ಮಾಲೀಕರು, ಬೀದಿ ಬದಿ ವ್ಯಾಪಾರಿಗಳು, ಖಾಸಗಿ ಬಸ್ ಮಾಲೀಕರು ಸೇರಿದಂತೆ ಅನೇಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ ಎಂದು ತಿಳಿಸಿದರು.

ಕಿಸಾನ್ ಸಂಯುಕ್ತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ ಮಾತನಾಡಿ, ಇಂದು ಸಂಜೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ. ಕರಪತ್ರ ವಿತರಿಸಲಾಗುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು