ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ ಆರೋಪ ಹೊತ್ತು ‘ಎ-1’ ಅರೋಪಿಯಾಗಿರುವ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ಐಪಿಸಿ ಕಲಂ 306, 34ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದು ಖಂಡನೀಯ .A1ಆರೋಪಿ ಈಶ್ವರಪ್ಪನವರನ್ನು ಬಂಧಿಸದೇ ಇದ್ದಲ್ಲಿ ಎನ್.ಎಸ್.ಯು.ಐ. ಪ್ರತಿಭಟನೆ ಮುಂದುವರೆಸುವುದಾಗಿ ಈ ಮೂಲಕ ಎಚ್ಚರಿಸುತ್ತಿದ್ದೇವೆ.
ಈ ಸಂದರ್ಭದಲ್ಲಿ NSUIಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ,ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ,ಯುವ ಮುಖಂಡ ಮಧುಸೂದನ್ , ಅಕ್ಬರ್,ಇಮ್ರಾನ್ ,ಗಿರೀಶ್ ,ಚಂದ್ರೋಜಿ ರಾವ್ ,ಗೌತಮ್, ಹಾಗೂ ಸಾಕಷ್ಟು ಯುವಕರು ಪಾಲ್ಗೊಂಡಿ ಆಕ್ರೋಶ ವ್ಯಕ್ತಪಡಿಸಿದರು.