ಶಿವಮೊಗ್ಗ : ಸಂಹವನ ಕ್ಷೇತ್ರಗಳು ಬೆಳೆಯಬೇಕೆಂದರೆ ಅದಕ್ಕೆ ಸಂಬಂಧ ಪಟ್ಟ ಪುಸ್ತಕಗಳು ಬೇಕು. ಈ ಎರಡು ಪುಸ್ತಕಗಳು ಸಂಶೋಧನೆಯ ಸಮಗ್ರ ಮಾಹಿತಿಯನ್ನು ನೀಡಿದೆ, ವಿಧ್ಯಾರ್ಥಿಗಳಿಗೆ ಉಪಯುಕ್ತವಾದ ಪುಸ್ತಕಗಳು ಎಂದು ಪ್ರೊ ಡಿ. ಎಸ್ ಪೂರ್ಣಾನಂದ ಇವರು ಕೃತಿಗಳ ಕುರಿತು ಮಾತನಾಡಿದರು.
ಸೆ. 1 ರಂದು ಕುವೆಂಪು ವಿಶ್ವ ವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಝೂಮ್ ಆನ್ ಲೈನ್ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಸತೀಶ್ ಕುಮಾರ್ ಅಂಡಿಂಜೆಯವರು ರಚಿಸಿದ ‘ ಸಮೂಹ ಮಾಧ್ಯಮ ಸಂಶೋಧನೆ ‘ ಮತ್ತು ‘ ಮಾಧ್ಯಮ ಲೋಕ ‘ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಈ ಪುಸ್ತಕಗಳು ಹಲವಾರು ವಿಷಯಗಳನ್ನು ಒಳಗೊಂಡಿದೆ. ಪತ್ರಿಕೋದ್ಯಮ, ಜಾನಪದ, ಸಾಹಿತ್ಯ, ಸಂಸ್ಕೃತಿ ಹಾಗೂ ಇತ್ತೀಜಿನ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಡಿ ತಕ್ಕಂತಹ ಋಣಾತ್ಮಕ ಮತ್ತು ಧನಾತ್ಮಕ ಬದಲಾವಣೆಗಳ ಕುರಿತು ವಿವರಿಸಿದ್ದಾರೆ.
ಸಂಶೋಧನೆಯಲ್ಲಿ ದತ್ತಾಂಶವನ್ನು ಹೇಗೆ ವಿವರಿಸಬಹುದು ಅನ್ನೋದನ್ನ ಬಹಳ ಸುಲಭವಾಗಿ ಮತ್ತು ಎಲ್ಲರಿಗೂ ಅರ್ಥಾಗುವಂತೆ ವಿವರಿಸಲಾಗಿದೆ ಎಂದರು.
ವಿಧ್ಯಾರ್ಥಿಗಳಿಗೆ ಅನುಕೂಲ ಆಗುವ ಸಲುವಾಗಿ ಮತ್ತು ಇತ್ತಿಜಿನ ದಿನಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕನ್ನಡದಲ್ಲಿ ಸಂಶೋಧನೆ ಮಾಡುತ್ತಿದ್ದಾರೆ. ಆದ್ದರಿಂದ ಅವರಿಗೆ ಉಪಯುಕ್ತವಾಗಲಿ ಅನ್ನೋ ನಿಟ್ಟಿನಲ್ಲಿ ಪುಸ್ತಕ ಗಳನ್ನು ಪರಿಚಯಿಲಾಯಿತು ಎಂದು ಡಾ ಸತೀಶ್ ಅಂಡಿಂಜೆ ಅವರು ಕಾರ್ಯಕ್ರಮ ದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಯ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ವಿಘ್ನೇಶ್ ಎನ್. ಭಟ್ ‘ಸಮೂಹ ಮಾಧ್ಯಮ ಸಂಶೋಧನೆ’ ಮತ್ತು ‘ ಮಾಧ್ಯಮ ಲೋಕ ‘ ಕೃತಿಗಳ ಲೋಕಾರ್ಪಣೆ ಗೈದರು.
ಕಾರ್ಯಕ್ರಮದಲ್ಲಿ ವಿಭಾಗದ ಪ್ರಾಧ್ಯಾಪಕರು , ಬೇರೆ ಬೇರೆ ಕಾಲೇಜಿನ ಅಧ್ಯಾಪಕರು ಹಾಗೂ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…
ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್ಗಳು…
ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…
ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.