News Karnataka Kannada
Tuesday, April 30 2024
ಶಿವಮೊಗ್ಗ

ಸಾಗರ ಗ್ರಾಮಾಂತರ ಪೋಲೀಸರ ಭರ್ಜರಿ ಕಾರ್ಯಾಚರಣೆ,ಮನೆಗಳ್ಳತನ ಆರೋಪಿಯನ್ನು ಮಾಲು ಸಮೇತ ವಶಕ್ಕೆ

New Project (1)
Photo Credit :

ಸಾಗರ:  ಇಲ್ಲಿನ ಆವಿನಹಳ್ಳಿ ಬಸ್ ನಿಲ್ದಾಣದ ಬಳಿ 30 ವರ್ಷದ ವ್ಯಕ್ತಿಯನ್ನು ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಆರೋಪಿ ಸಾಗರ ಗ್ರಾಮಾಂತರ ವ್ಯಾಪ್ತಿಯ ಮನೆಗಳಲ್ಲಿ ಕಳ್ಳತನ ಮಾಡಿದ್ದು ಗೊತ್ತಾಗಿದೆ. ಈ ವೇಳೆ ಆತನಿಂದ ಬಂಗಾರದ ಬಂಗಾರದ ಆಭರಣ,ಬೆಳ್ಳಿ,ನಗದು ಹಣ ಹಾಗೂ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯಿಂದ ಒಟ್ಟು 4.71.660 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲಾ.ಎಸ್.ಪಿ ಲಕ್ಷ್ಮಿ ಪ್ರಸಾದ್ ಮತ್ತು ಹೆಚ್ಚುವರಿ ಎಸ್.ಪಿ ಶೇಖರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಸಾಗರ ಉಪ ವಿಭಾಗದ ಡಿ.ವೈ.ಎಸ್.ಪಿ ವಿನಾಯಕ್ ಶೆಟಗೇರಿ ಸೂಚನೆ ಮೇರೆಗೆ ವಿಶೇಷ ತಂಡವನ್ನು ರಚಿಸಲಾಗಿತ್ತು. ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಗಿರೀಶ್,ಸಬ್ ಇನ್ಸ್ ಪೆಕ್ಟರ್ ಸುಜಾತ ಸಿಬ್ಬಂದಿಗಳಾದ ಶ್ರೀಧರ್, ಗಿರೀಶ್ ಬಾಬು, ಅಶೋಕ್, ಈರಯ್ಯ, ಪ್ರಕಾಶ್, ಮೇಘರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು