ಸ್ಮಾರ್ಟ್ ಸಿಟಿ ಯೋಜನೆ ವಿಳಂಬ ಪಾದಚಾರಿಗಳಿಗೆ ಹಾಗೇ ವಾಹನ ಚಾಲಕರಿಗೆ ಸಂಕಷ್ಟ

ಶಿವಮೊಗ್ಗ:   ಇತ್ತೀಚೆಗೆ ಕೇಂದ್ರ ಸರಕಾರ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಕಾಮಗಾರಿ ವಿಳಂಬಕ್ಕೆ ಚಾಟಿ ಬೀಸಿದ್ದು, ಅನುದಾನ ಕಡಿತಗೊಳಿಸುವುದಾಗಿ ಹೇಳಿತ್ತು. ಇದೆಲ್ಲದರ ಮಧ್ಯೆಯೂ ವಿವೇಚನಾರಹಿತ ಕಾಮಗಾರಿಗಳು ಮಾತ್ರ ಜನರ ನೆಮ್ಮದಿ ಕೆಡಿಸಿವೆ. ಎಂಜಿನಿಯರಿಂಗ್ ಡೇ ಆಚರಿಸುವ ಸಂದರ್ಭದಲ್ಲಿ ಶಿವಮೊಗ್ಗ ಸ್ಮಾರ್ಟ್‌ ಸಿಟಿ ಯೋಜನೆಯಿಂದ ಎಂಜಿನಿಯರ್‌ಗಳಿಗೆ ಮಾತ್ರ ಹಿಡಿಶಾಪ ಹಾಕಲಾಗುತ್ತಿದೆ.ಶಿವಮೊಗ್ಗದಲ್ಲಿ ಬಹುಕೋಟಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಎರಡು ವರ್ಷಗಳಿಂದ ಇಡೀ ನಗರವನ್ನೇ ಅಧ್ವಾನ ಮಾಡಿ ಹಾಕಿವೆ. ನಿಗದಿತ ಅವಧಿಯಲ್ಲಿ ಕಾಮಗರಿಗಳು ಪೂರ್ಣಗೊಳ್ಳದೇ, ಜನರನ್ನು ಸಂಕಷ್ಟಕ್ಕೆ ತಳ್ಳಿವೆ. ಎಲ್ಲಿ ಹೋದರೂ ಸಹ ಹದಗೆಟ್ಟ ರಸ್ತೆ, ಕಿತ್ತು ಹಾಕಿರುವ ಚರಂಡಿ, ಆಳುದ್ದದ ಗುಂಡಿಗಳನ್ನು ನೋಡಿ ಜನ ಹೈರಾಣಾಗಿದ್ದಾರೆ.

ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಹೆಚ್‌‌ಸಿ ಯೋಗೀಶ್‌, ಶಿವಮೊಗ್ಗದಲ್ಲಿ ಒಟ್ಟು 53 ಸ್ಮಾರ್ಟ್‌ ಸಿಟಿ ಕಾಮಗಾರಿಗಳು ನಡೆಯುತ್ತಿವೆ ಆದರೆ ಒಂದೂ ಕೂಡ ನಿಗದಿತ ಅವಧಿಯಲ್ಲಿ ಮುಗಿಯುತ್ತಿಲ್ಲ. ಕೇವಲ ಪಾರ್ಕ್‌ ಕೆಲಸಗಳನ್ನ ಮಾತ್ರ ಮುಗಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸ್ಮಾರ್ಟ್‌ ಸಿಟಿ ಯೋಜನೆ ನೆನೆಗುದಿಗೆ ಬೀಳಲು ಆಡಳಿತ ನಡೆಸುತ್ತಿರುವ ಬಿಜೆಪಿಯೇ ನೇರ ಹೊಣೆ. ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಮುಖ ನಾಲ್ಕು ನಿರ್ದೇಶಕರೂ ಸಹ ಬಿಜೇಪಿಯವರೇ ಆಗಿದ್ದಾರೆ ಎಂದು ಯೋಗೀಶ್‌ ಹರಿಹಾಯ್ದರು

Swathi MG

Recent Posts

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

1 min ago

ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು : ಉಳಿದೆಡೆ ಗುಡುಗು ಸಹಿತ ಮಳೆ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ, ರಾಮನಗರ, ಬೆಂಗಳೂರು…

26 mins ago

ಈ ರಾಶಿಯವರಿಗೆ ಇಂದು ಆಪ್ತರಿಂದ ಆರ್ಥಿಕವಾಗಿ ಸಹಾಯ

ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಆಪ್ತರಿಂದ ಸಿಹಿ…

46 mins ago

85 ರೂನಷ್ಟು ಕಡಿಮೆಗೊಂಡ ಚಿನ್ನದ ಬೆಲೆ : ಇಲ್ಲಿದೆ ಇವತ್ತಿನ ದರಪಟ್ಟಿ

ಮೂರ್ನಾಲ್ಕು ವಾರಗಳ ಅದ್ವಿತೀಯ ರೀತಿಯಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈ ವಾರ ಶಾಂತಗೊಂಡಿವೆ. ಈ ವಾರ…

1 hour ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ…

1 hour ago

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

9 hours ago