ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು : ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

ಶಿವಮೊಗ್ಗ: ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾದರೆ ಸಾಲದು, ಆದರ ಹಿಂದಿನ ಷಡ್ಯಂತ್ರ ಬಯಲಾಗಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು. ಎನ್ಐಎ ತನಿಖೆಗೆ ಬಿಜೆಪಿ ಮುಖಂಡರೇ ಆಗ್ರಹಿಸಿದ್ದಾರೆ. ಇದು ಕೇವಲ ಹೇಳಿಕೆಯಾಗಬಾರದು. ನಿಜವಾದ ತನಿಖೆಯಾಗಿ ಆರೋಪಿಗಳ ಜೊತೆಗೆ ಇದರ ಹಿಂದಿನ ಶಕ್ತಿಗಳಿಗೂ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಹರಿಹಾಯ್ದ ಪ್ರಸನ್ನಕುಮಾರ್, ಈಶ್ವರಪ್ಪ ಶಾಸಕರಾಗಲು ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಗಳ ರಕ್ಷಣೆಗಾಗಿ ನಮಗೆ ಮತ ಹಾಕಬೇಕೆಂದು ಹೇಳಿ ಮತ ಹಾಕಿಸಿಕೊಂಡಿದ್ದಾರೆ. ಆದರೆ, ಅವರೇ ಹೇಳಿಕೊಳ್ಳುವಂತೆ ಅವರ ಹಿಂಬಾಲಕನ ಹತ್ಯೆಯಾಗಿದೆ. ಹಿಂದೂಗಳ ರಕ್ಷಣೆ ನೀಡುತ್ತೇನೆ ಎಂದು ಬೊಬ್ಬಿಟ್ಟರೆ ಸಾಲದು, ಹಿಂದೂಗಳ ರಕ್ಷಣೆಗೆ ಇವರೇನು ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಸಚಿವರೇ ಹೇಳಿದಂತೆ ಹರ್ಷನ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ ಎಂದಿದ್ದಾರೆ. ಗಲಾಟೆ ಮಾಡಿದವರನ್ನು ಗುರುತಿಸಿದ್ದಾಗ ಪೊಲೀಸರಿಗೆ ಏಕೆ ಮಾಹಿತಿ ನೀಡಲಿಲ್ಲ. ಸಚಿವರ ಹೇಳಿಕೆಯ ಕುಮ್ಮಕ್ಕಿನಿಂದಲೇ ಕೆಲವರು ಗಲಭೆ ಎಬ್ಬಿಸಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ.

ಇದಕ್ಕೆಲ್ಲಾ ಈಶ್ವರಪ್ಪ ಅವರೇ ಕಾರಣ. ಈ ನಷ್ಟವನ್ನು ಅವರೇ ತುಂಬಿಕೊಡಬೇಕೆಂದು ಆಗ್ರಹಿಸಿದರು. ಶಿವಮೊಗ್ಗದಲ್ಲಿ ಕಳೆದ 2 ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಮಾಡುತ್ತಲೆ ಇದ್ದಾರೆ.

ಆದರೆ ಈ ಬಿಜೆಪಿ ಮುಖಂಡರು ಭಾವನಾತ್ಮಕವಾಗಿ ಮಾತನಾಡಿ ಶಾಂತಿ ಕದಡುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹರ್ಷನ ಸಾವು ಅವರ ಕುಟುಂಬದವರನ್ನು ಕಾಡುತ್ತಲೇ ಇದೆ. ಅವರು ದುಃಖಿಸುವುದನ್ನು ನೋಡಿದರೆ ಕರಳು ಕಿತ್ತು ಬರುತ್ತದೆ.

ಆ ಕುಟುಂಬಕ್ಕೆ ಪರಿಹಾರ ನೀಡುವುದರ ಜೊತೆಗೆ ಸರ್ಕಾರಿ ಕೆಲಸ ನೀಡಬೇಕು, ಗಲಭೆಯಲ್ಲಿ ಇದುವರೆಗೂ ಆಸ್ತಿ ಪಾಸ್ತಿ ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಹಿಂದೂಗಳಿಗೆ ರಕ್ಷಣೆಯನ್ನು ಕೊಡದ ಈಶ್ವರಪ್ಪ ರಾಜೀನಾಮೆ ನೀಡಬೇಕು ಮತ್ತು ಹರ್ಷನ ಕೊಲೆ ಪ್ರಕರಣ ನಿಷ್ಪಕ್ಷವಾಗಿ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

Sneha Gowda

Recent Posts

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

13 seconds ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

11 mins ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

22 mins ago

ಅನ್ಯದೇಶಿಗರಿಗೆ ಭಾರತ ಮುಕ್ತವಾಗಿಲ್ಲ ಎಂದ ಬೈಡನ್‌ಗೆ ಉತ್ತರಿಸಿದ ಜೈಶಂಕರ್‌

ಭಾರತ ಸೇರಿದಂತೆ ಹಲವು ದೇಶಗಳು ಅನ್ಯದೇಶಿಗರಿಗೆ ತೆರೆದುಕೊಂಡಿಲ್ಲ ಎಂದ ಅಮೇರಿಕಾ ಅಧ್ಯಕ್ಷ ಜೋ ಬೈಡನ್‌ರ ಹೇಳಿಕೆಗೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ…

22 mins ago

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಭಾಗಿ

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರ ಪರವಾಗಿ ಕುಂದಗೋಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಬೃಹತ್ ಬಹಿರಂಗ ಪ್ರಚಾರ…

48 mins ago

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮೇಲೆ ಬರಲಿದೆ ಬಯೋಪಿಕ್

ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಣ್ಣಾಮಲೈ  ಅವರು ಬಿಜೆಪಿ ಸೇರ್ಪಡೆ ಆಗಿ ರಾಜಕೀಯಕ್ಕೆ ಕಾಲಿಟ್ಟರು. ಈಗ  ಕೊಯಿಮತ್ತೂರು ಕ್ಷೇತ್ರದಿಂದ ಬಿಜೆಪಿ…

56 mins ago