News Karnataka Kannada
Sunday, April 28 2024
ಶಿವಮೊಗ್ಗ

ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರ: ಎನ್ಐಎ ಪ್ರಾಥಮಿಕ ವರದಿಯಲ್ಲಿ ಬಹಿರಂಗ

K'taka district tense after miscreants threaten slain Bajrang Dal activist's family
Photo Credit :

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ(NIA) ಪ್ರಾಥಮಿಕ ವರದಿ ನೀಡಿದ್ದು, ಹರ್ಷ ಕೊಲೆ ಹಿಂದೆ ಕೋಮು ಗಲಭೆಯ ಹುನ್ನಾರವಿತ್ತು ಎಂದು ತಿಳಿಸಿದೆ.

ಹರ್ಷ ಹತ್ಯೆ ಹಿಂದೆ ಸಮಾಜದ ಸ್ವಾಸ್ಥ್ಯ ಕದಡುವ ಉದ್ದೇಶ ಅಡಗಿತ್ತು. ಈ ಮೂಲಕ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ಅಡಗಿತ್ತು ಎಂದು ಎನ್ ಐ ಎ ವರದಿಯಲ್ಲಿ ಬಹಿರಂಗವಾಗಿದೆ.

ಪ್ರಕರಣ ಸಂಬಂಧ ಈಗಾಗಲೇ 10 ಆರೋಪಿಗಳನ್ನು ಬಂಧಿಸಲಾಗಿದೆ. ಹರ್ಷ ಹತ್ಯೆ ನಡೆದಿರುವುದು ಯಾವುದೇ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರವಾಗಿ ಅಲ್ಲ. ಎಲ್ಲಾ ಹತ್ತು ಆರೋಪಿಗಳು ಕೋಮು ಗಲಭೆ ಸೃಷ್ಟಿಸುವ ಕಾರಣಕ್ಕಾಗಿಯೇ ಸಮಾಜದಲ್ಲಿ ಭಯದ ವಾತಾವರಣ ನಿರ್ಮಿಸುವ ಉದ್ದೇಶಕ್ಕೆ ಹತ್ಯೆ ಮಾಡಿದ್ದಾಗಿ ಎನ್ ಐ ಎ ದಾಖಲಿಸಿರುವ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು